ಮಂಡ್ಯ(ಸೆ.24): ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರ ಮತ್ತು ಬಂಧಿತ ರೈತರ ಬಿಡುಗಡೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ 18 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಕಾವೇರಿ ಹಿತರಕ್ಷಣಾ ಸಮಿತಿ ಸಭೆ ಅಧ್ಯಕ್ಷ ಜಿ.ಮಾದೇಗೌಡರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭರವಸೆ ನಿಟ್ಟಿನಲ್ಲಿ ಚಳವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಇಂದು ನಡೆದ ಕಾವೇರಿ ಹಿತರಕ್ಷಣಾ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಹೇಳಿದರು. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮಾದೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred