ಇಂದು ಕಾವೇರಿ ತೀರ್ಪು : ಎಲ್ಲೆಡೆ ಹೈ ಅಲರ್ಟ್
ಸುಪ್ರೀಂಕೋರ್ಟ್’ನಲ್ಲಿ ಇಂದು ಕಾವೇರಿ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳ, ಮಂಡ್ಯ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು : ಸುಪ್ರೀಂಕೋರ್ಟ್’ನಲ್ಲಿ ಇಂದು ಕಾವೇರಿ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳ, ಮಂಡ್ಯ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಆದರೆ ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲು ನಿರ್ಧಾನ ಮಾಡಲಾಗಿದೆ.
ಮಂಡ್ಯ ಮೈಸೂರು ಹಾಗೂ ಚಾಮರಾಜನಗರಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರಂದೀಪ್ ಸುವರ್ಣನ್ಯೂಸ್’ಗೆ ಮಾಹಿತಿ ನೀಡಿದ್ದಾರೆ.