Asianet Suvarna News Asianet Suvarna News

HSRನಲ್ಲಿ ಮತ್ತೊಬ್ಬ ಐಟಿ ಅಧಿಕಾರಿ ಬಲೆಗೆ, ಕೇಸ್ ಖುಲಾಸೆಗೆ ಕೇಳಿದ್ದ ಹಣ ಅಬ್ಬಬ್ಬಾ!

ಮಿಂಚಿನ ಕಾರ್ಯಾಚರಣೆ ನಡೆಸಿರುವ ಸಿಬಿಐ ಅಧಿಕಾರಿಗಳು ಬೆಂಗಳೂರಿನಲ್ಲಿ ಮತ್ತೊಬ್ಬ ಐಟಿ ಅಧಿಕಾರಿಯನ್ನು ಬಂಧಿಸಿದ್ದಾರೆ.

cbi-arrests Income Tax -officer-narendra Singh Bengaluru
Author
Bengaluru, First Published Apr 3, 2019, 11:42 PM IST

ಬೆಂಗಳೂರು[ಏ. 03]  ಜಯನಗರದ ಕಾಫಿ ಡೇಯಲ್ಲಿ ಲಂಚ ಪಡೆಯುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಯನ್ನು ಬಂಧಿಸಿದ ಕೆಲವೇ ಹೊತ್ತಿನಲ್ಲಿ ಸಿಬಿಐ ಅಧಿಕಾರಿಗಳು ಮತ್ತೊಬ್ಬ ಅಧಿಕಾರಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಜಯನಗರದ ಕೆಫೆ ಕಾಫಿಡೇನಲ್ಲಿ ಇಂದು [ಬುಧವಾರ] ಸಂಜೆ ಗುತ್ತಿಗೆದಾರನಿಂದ 14ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ನಾಗೇಶ್ ಅವರನ್ನು ಮೊದಲಿಗೆ ಬಂಧಿಸಲಾಗಿತ್ತು. ಈಗ  ಮತ್ತೊಬ್ಬ ಐಟಿ ಅಧಿಕಾರಿ ನರೇಂದ್ರ ಸಿಂಗ್ ಎಂಬುವರನ್ನು   ಎಚ್ಎಸ್ಆರ್ ಲೇಔಟ್ ನ ಮನೆ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ. 

ಬೆಂಗಳೂರಿನಲ್ಲಿ ಲಂಚ ಪಡೆಯುತ್ತಿದ್ದ ಐಟಿ ಅಧಿಕಾರಿ ಅರೆಸ್ಟ್

40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದ 2ನೇ ಆರೋಪಿ ನರೇಂದ್ರ ಸಿಂಗ್ ಆಗಿದ್ದಾರೆ. ಇತ್ತೀಚೆಗಷ್ಟೇ ಈ ಐಟಿ ಅಧಿಕಾರಿಗಳು ಗುತ್ತಿಗೆದಾರ ಶ್ರೀನಿವಾಸ್​ ಮನೆ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣದಿಂದ ಶ್ರೀನಿವಾಸ್​ ಅವರನ್ನು  ಖುಲಾಸೆಗೊಳಿಸುವ ಸಲುವಾಗಿ ಹಣದ ಬೇಡಿಕೆ ಇಟ್ಟಿದ್ದರು. ಆ ಹಣವನ್ನು ಸ್ವೀಕರಿಸುತ್ತಿದ್ದಾಗ ನಾಗೇಶ್ ಮೊದಲು ಬಲೆಗೆ ಬಿದ್ದಿದ್ದು ಈಗ ಎರಡನೇ ಆರೋಪಿ ನರೇಂದ್ರ ಸಿಂಗ್ ಅವರನ್ನು ಬಂಧಿಸಲಾಗಿದೆ.

Follow Us:
Download App:
  • android
  • ios