ಕಲ್ಲಿದ್ದಲು ಹಗರಣ: ಸಿಬಿಐ ಮಾಜಿ ನಿರ್ದೇಶಕರ ವಿರುದ್ಧ ಎಫ್'ಐಆರ್
ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸಿನ್ಹಾ ವಿರುದ್ಧ 3 ತಿಂಗಳ ಹಿಂದೆ ಪ್ರಕರಣ ದಾಖಲಿಸಲಾಗಿತ್ತು. ಸಿನ್ಹಾ ಅವರು ನಿರ್ದೇಶಕರಾಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾರಣ 2017ರ ಜನವರಿಯಲ್ಲಿ ಸುಪ್ರೀಂ ಕೋರ್ಟ್'ನ ತ್ರಿಸದಸ್ಯತ್ವ ಪೀಠ ತನಿಖೆಗೆ ಆದೇಶಿಸಿತ್ತು.
ನವದೆಹಲಿ(ಏ.25): ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಭಾಗಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ಅವರ ವಿರುದ್ಧ ಸಿಬಿಐ ಎಫ್'ಐಆರ್ ದಾಖಲಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸಿನ್ಹಾ ವಿರುದ್ಧ 3 ತಿಂಗಳ ಹಿಂದೆ ಪ್ರಕರಣ ದಾಖಲಿಸಲಾಗಿತ್ತು. ಸಿನ್ಹಾ ಅವರು ನಿರ್ದೇಶಕರಾಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾರಣ 2017ರ ಜನವರಿಯಲ್ಲಿ ಸುಪ್ರೀಂ ಕೋರ್ಟ್'ನ ತ್ರಿಸದಸ್ಯತ್ವ ಪೀಠ ತನಿಖೆಗೆ ಆದೇಶಿಸಿತ್ತು.
ಸಿನ್ಹಾ ಅವರು 2012-14ರ ಅವಧಿಯಲ್ಲಿ ಸಿಬಿಐ ನಿರ್ದೇಶಕರಾಗಿದ್ದಾಗ ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿದ್ದ ಹಿರಿಯ ರಾಜಕಾರಣಿಗಳು, ಉದ್ಯಮಿಗಳನ್ನು ಒಳಗೊಂಡಂತೆ ಆರೋಪಿಗಳೊಂದಿಗೆ ತಮ್ಮ ಅಧಿಕೃತ ನಿವಾಸದಲ್ಲಿ ಸಭೆ ನಡೆಸಿದ್ದರು. ಹಿರಿಯ ನ್ಯಾಯವಾದಿಯಾದ ಪ್ರಶಾಂತ್ ಭೂಷಣ್, ಸಿನ್ಹಾ ಹಗರಣದಲ್ಲಿ ಶಾಮೀಲಾಗಿದ್ದು ಇವರ ವಿರುದ್ಧ ಸಿಬಿಐ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.