`ಯಾವ ಕಾರಣಕ್ಕೆ ನೀವು ರೇಡ್ ಮಾಡಿದ್ದೀರಾ..? ಎಂದು ಪ್ರಶ್ನಿಸಿರುವ ನಿರ್ದೇಶಕರು, ಸಿಬಿಐ ದಾಳಿ ನಡೆಸಿದ ಒಂದು ವಾರದ ನಂತರ ದಾಳಿ ನಡೆಸುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ತನಿಖೆ ನಡೆಸುತ್ತಿರುವಾಗ ನೀವು ದಾಳಿ ಮಾಡಿದ್ದೇಕೆ..? ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಅದೇ ಕಾನೂನಿನ ಅಡಿಯಲ್ಲಿ ನೀವ್ಯಾಕೆ ಎಫ್ಐಆರ್ ದಾಖಲಿಸಿಕೊಂಡಿದ್ದೀರಿ ಎಂದು ಸಿಬಿಐ ಜಂಟಿ ನಿರ್ದೇಶಕರು ಎಸಿಬಿ ಹಿರಿಯ ಅಧಿಕಾರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಬೆಂಗಳೂರು(ಡಿ.19): ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳನ್ನ ಸಿಬಿಐ ತರಾಟೆಗೆ ತೆಗೆದುಕೊಂಡಿದೆ. ಎಸಿಬಿಯ ಹಿರಿಯ ಅಧಿಕಾರಿಗೆ ಪೋನ್ ಮಾಡಿದ್ದ ಸಿಬಿಐ ಜಂಟಿ ನಿರ್ದೇಶಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
`ಯಾವ ಕಾರಣಕ್ಕೆ ನೀವು ರೇಡ್ ಮಾಡಿದ್ದೀರಾ..? ಎಂದು ಪ್ರಶ್ನಿಸಿರುವ ನಿರ್ದೇಶಕರು, ಸಿಬಿಐ ದಾಳಿ ನಡೆಸಿದ ಒಂದು ವಾರದ ನಂತರ ದಾಳಿ ನಡೆಸುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ತನಿಖೆ ನಡೆಸುತ್ತಿರುವಾಗ ನೀವು ದಾಳಿ ಮಾಡಿದ್ದೇಕೆ..? ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಅದೇ ಕಾನೂನಿನ ಅಡಿಯಲ್ಲಿ ನೀವ್ಯಾಕೆ ಎಫ್ಐಆರ್ ದಾಖಲಿಸಿಕೊಂಡಿದ್ದೀರಿ ಎಂದು ಸಿಬಿಐ ಜಂಟಿ ನಿರ್ದೇಶಕರು ಎಸಿಬಿ ಹಿರಿಯ ಅಧಿಕಾರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಐಟಿ ದಾಳಿ ನಡೆದು ಒಂದು ವಾರದ ನಂತರ ಜಯಚಂದ್ರ ಮತ್ತು ಚಿಕ್ಕರಾಯಪ್ಪ ಮನೆ ಮೇಲೆ ಎಸಿಬಿ ದಾಳಿ ಮಾಡಿತ್ತು.
