ಬಹುಚರ್ಚಿತ ವಿಚಾರ ತ್ರಿವಳಿ ತಲಾಖ್​​​ ಪದ್ದತಿ ತಡೆಗೆ ಚಳಿಗಾಲದ ಅಧಿವೇಶನದಲ್ಲಿ  ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ನವದೆಲಿ (ನ.21): ಬಹುಚರ್ಚಿತ ವಿಚಾರ ತ್ರಿವಳಿ ತಲಾಖ್​​​ ಪದ್ದತಿ ತಡೆಗೆ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಸ್ಲೀಂ ಸಂಘಟನೆಗಳ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಮಸೂದೆ ಜಾರಿಗೆ ತರಲು ಹೊರಟಿದೆ. ಮುಸ್ಲೀಂ ಮಹಿಳೆಯರಿಗೆ ಸ್ವಾತಂತ್ರ ಕೊಡಿಸಲು ಸರ್ಕಾರ ದಿಟ್ಟ ಹೆಜ್ಜೆ ಇಡಲು ಮುಂದಾಗಿದೆ. ಕೇಂದ್ರ ಸರ್ಕಾರ ಎಲ್ಲಾ ಪಕ್ಷಗಳಿಂದ ಸಂಪೂರ್ಣ ಬೆಂಬಲವನ್ನು ನಿರೀಕ್ಷಿಸುತ್ತಿದೆ.

ವಿವಾದ ಗ್ರಾಸವಾಗಿರುವ ತ್ರಿವಳಿ ತಲಾಖ್'ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್’ನ ಐವರು ನ್ಯಾಯಾಧೀಶರ ಪೀಠವು ತ್ರಿವಳಿ ತಲಾಖ್ ವಿಚ್ಛೇದನದ ‘ಕೆಟ್ಟ ಹಾಗೂ ಅನಪೇಕ್ಷಿತ ‘ ರೀತಿಯಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.