2014ರ ಲೋಕಸಭೆ ಚುನಾವಣೆಯ ಪ್ರಣಾಳಿಕೆ ವೇಳೆ ನೀಡಲಾದ ಬಾಕಿ ಭರವಸೆಗಳನ್ನು ಈಡೇರಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ.

ನವದೆಹಲಿ: 2014ರ ಲೋಕಸಭೆ ಚುನಾವಣೆಯ ಪ್ರಣಾಳಿಕೆ ವೇಳೆ ನೀಡಲಾದ ಬಾಕಿ ಭರವಸೆಗಳನ್ನು ಈಡೇರಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ. ಅದಕ್ಕೆಂದೇ ಇನ್ನು 20 ದಿನದಲ್ಲಿ ಮಂಡನೆಯಾಗಲಿರುವ ಮುಂಗಡಪತ್ರದಲ್ಲಿ ಬಾಕಿ ಉಳಿದಿರುವ ಭರವಸೆಗಳು ಈಡೇರುವ ನಿರೀಕ್ಷೆಯಿದೆ.

Add Asianetnews Kannada as a Preferred SourcegooglePreferred

ಯಾವ ಭರವಸೆಗಳು ಈಡೇರದೇ ಬಾಕಿ ಉಳಿದಿವೆ ಎಂಬುದರ ಪಟ್ಟಿಯನ್ನು ಸಿದ್ಧಪಡಿಸಲು ಪ್ರಧಾನಮಂತ್ರಿಗಳು ಎಲ್ಲ ಸಚಿವಾಲಯಗಳಿಗೆ ಸೂಚಿಸಿದ್ದಾರೆ. ಈ ಪ್ರಕಾರ, ಅಂಗವಿಕಲರನ್ನು ಪೋಷಿಸುವ ಕುಟುಂಬಗಳಿಗೆ ಹೆಚ್ಚಿನ ತೆರಿಗೆ ವಿನಾಯ್ತಿ ನೀಡುವ ಭರವಸೆಯನ್ನು 2014ರಲ್ಲಿ ಬಿಜೆಪಿ ನೀಡಿತ್ತು.

ಈಗ ಈ ಬೇಡಿಕೆಯನ್ನು ಈಡೇರಿಸಬೇಕು. ಮುಂಗಡ ಪತ್ರದಲ್ಲಿ ಇದನ್ನು ಘೋಷಣೆ ಮಾಡಬೇಕು ಎಂದು ಸಾಮಾ ಜಿಕ ನ್ಯಾಯ ಸಚಿವಾಲಯವು ವಿತ್ತ ಸಚಿವಾಲಯಕ್ಕೆ ಮನವಿ ಸಲ್ಲಿಸಿದೆ. ಈಗ ಆದಾಯ ತೆರಿಗೆ ಇಲಾಖೆಯು ಅಂಗವಿಕಲರನ್ನು ನೋಡಿ ಕೊಳ್ಳುವ ಕುಟುಂಬಕ್ಕೆ ಕೆಲ ಮಟ್ಟಿನ ತೆರಿಗೆ ವಿನಾಯ್ತಿ ನೀಡುತ್ತದೆ.