ಬೆಳಗಾವಿ ವಿಮಾನ ನಿಲ್ಧಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ಅನುಮೋದನೆ ನೀಡಲಿದೆ ಎಂದು ವಿಮಾನಯಾನ ಸಚಿವ ಅಶೋಕ ಗಜಪತಿರಾಜು ಹೇಳಿದ್ದಾರೆ.

ಬೆಳಗಾವಿ (ಸೆ.15): ಬೆಳಗಾವಿ ವಿಮಾನ ನಿಲ್ಧಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ಅನುಮೋದನೆ ನೀಡಲಿದೆ ಎಂದು ವಿಮಾನಯಾನ ಸಚಿವ ಅಶೋಕ ಗಜಪತಿರಾಜು ಹೇಳಿದ್ದಾರೆ.

ಮೇಲ್ದರ್ಜೆಗೇರಿಸಿದ ಬೆಳಗಾವಿ ವಿಮಾನ ನಿಲ್ದಾಣವನ್ನು ಲೋಕಾಗರ್ಪಣೆಗೊಳಿಸಿ, ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ಮೂಲಕ ವೀರರಾಣಿ ಚೆನ್ನಮ್ಮಳ ಇತಿಹಾಸವನ್ನು ನಮ್ಮ ಪೀಳಿಗೆಗೆಗ ಪರಿಚಯ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ರಾಜ್ಯದಲ್ಲಿ ಪ್ರತಿ 150 ಕಿಮೀ ಅಂತರದಲ್ಲಿ ಸಣ್ಣ ವಿಮಾನ ನಿಲ್ದಾಣ ಸ್ಥಾಪಿಸಲಾಗುತ್ತಿದ್ದು ಈ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಶಿವಮೊಗ್ಗ, ವಿಜಯಪುರ, ಹಾಸನ ಹಾಗೂ ಕಲ್ಬುರ್ಗಿಗಳಲ್ಲಿ ಈ ರೀತಿಯ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ರಸ್ತೆ, ರೈಲು ಆಗೂ ವಿಮಾನ ಸಂಪರ್ಕ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಕೇಂದ್ರಕ್ಕೆ ಭರವಸೆ ನೀಡಿದರು.