ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇ.1 ರಿಂದ ಶೇ.5 ರಷ್ಟು ಕೇಂದ್ರ ಸರ್ಕಾರ ಹೆಚ್ಚಿಸಿರುವುದಾಗಿ ಇಂದು ಘೋಷಿಸಿದೆ.

ನವದೆಹಲಿ (ಸೆ.12): ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇ.1 ರಿಂದ ಶೇ.5 ರಷ್ಟು ಕೇಂದ್ರ ಸರ್ಕಾರ ಹೆಚ್ಚಿಸಿರುವುದಾಗಿ ಇಂದು ಘೋಷಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಸದೀಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. 50 ಲಕ್ಷ ಉದ್ಯೋಗಿಗಳು ಹಾಗೂ 61 ಲಕ್ಷ ಪಿಂಚಣಿದಾರರು ಇದರ ಲಾಭವನ್ನು ಪಡೆಯಲಿದ್ದಾರೆ. ಈ ನೂತನ ನೀತಿ ಜು.01 ರಿಂದ ಅನ್ವಯವಾಗಲಿದೆ. ಅದೇ ರೀತಿ ಖಾಸಗಿ ವಲಯದ ಉದ್ಯೋಗಿಗಳಿಗೆ ಗ್ರಾಚುಯಿಟಿಯನ್ನು ಹೆಚ್ಚಿಸುವ ಮಸೂದೆಗೂ ಕೂಡಾ ಅನುಮೋದನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮವನ್ನು ತಜ್ಞರು ಸ್ವಾಗತಿಸಿದ್ದಾರೆ. ಗ್ರಾಚುಯಿಟಿ ಹೆಚ್ಚಿಸುವ ವಿಚಾರ ಬಹಳ ಹಿಂದಿನಿಂದಲೂ ಹಾಗೆ ಉಳಿದುಕೊಂಡಿತ್ತು. ಅದಕ್ಕಿಂದು ಅನುಮೋದನೆ ಸಿಕ್ಕಿದೆ. ಇದು ಹಣದುಬ್ಬರವನ್ನು ನಿಯಂತ್ರಿಸುತ್ತದೆ. ಆದರೆ ತುಟ್ಟಿಭತ್ಯೆ ಹೆಚ್ಚಳದಿಂದ ಆರ್ಥಿಕತೆಗೆ ಉತ್ತೇಜನ ಸಿಗುವುದಿಲ್ಲ ಎಂದು ಆರ್ಥಿಕ ತಜ್ಞ ಡಿ ಕೆ ಜೋಷಿ ಅಭಿಪ್ರಾಯಪಟ್ಟಿದ್ದಾರೆ.