ಕಾವೇರಿ ನಿರ್ವಹಣಾ ಮಂಡಳಿ ರಚನೆ : 3 ತಿಂಗಳ ಸಮಯಾವಕಾಶ ಕೋರಿದ ಕೇಂದ್ರ
ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಲು ಸುಪ್ರೀಂಕೋರ್ಟ್ 6 ವಾರಗಳ ಸಮಯವನ್ನು ನೀಡಿದ್ದು, ಇದೀಗ ಕೇಂದ್ರ ಸರ್ಕಾರವು ಮೂರು ತಿಂಗಳ ಕಾಲ ವಿಸ್ತರಣೆ ಮಾಡಬೇಕು ಎಂದು ಕೇಳಿಕೊಂಡಿದೆ.
ನವದೆಹಲಿ : ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಲು ಸುಪ್ರೀಂಕೋರ್ಟ್ 6 ವಾರಗಳ ಸಮಯವನ್ನು ನೀಡಿದ್ದು, ಇದೀಗ ಕೇಂದ್ರ ಸರ್ಕಾರವು ಮೂರು ತಿಂಗಳ ಕಾಲ ವಿಸ್ತರಣೆ ಮಾಡಬೇಕು ಎಂದು ಕೇಳಿಕೊಂಡಿದೆ.
ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಸಮಯವಾಕಾಶ ವಿಸ್ತರಣೆ ಮಾಡಬೇಕು ಎಂದು ಕೇಳಿಕೊಂಡಿದೆ. ಕರ್ನಾಟಕದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಮಯಾವಕಾಶ ಕೋರಿದೆ.
ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಕಾವೇರಿ ನಿರ್ವಹಣಾ ಮಂಡಳಿ ವಿಚಾರವಾಗಿ ಸುಪ್ರೀಂಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿದೆ.