ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಲು ಡಿ. 31 ಕ್ಕೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಅನಿರ್ದಿಷ್ಟಾವಧಿಗೆ ಮುಂದೂಡಿದೆ.

ನವದೆಹಲಿ (ಡಿ.13): ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಲು ಡಿ. 31 ಕ್ಕೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಅನಿರ್ದಿಷ್ಟಾವಧಿಗೆ ಮುಂದೂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಡುವನ್ನು ಅನಿರ್ದಿಷ್ಟಾವಧಿಗೊಳಿಸಿರುವ ಬಗ್ಗೆ ವಿತ್ತ ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ ಆ ಬಳಿಕ ಗಡುವು ನಿಗದಿಪಡಿಸುವುದಾಗಿ ವಿತ್ತ ಸಚಿವಾಲಯ ಹೇಳಿದೆ.

ಆಧಾರ್ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂಕೋ'ನ ಪಂಚ ನ್ಯಾಯಾಧೀಶರ ಪೀಠ ಗುರುವಾರ ವಿಚಾರಣೆ ನಡೆಸಲಿದೆ.