ಜನನಿಭಿಡ ಪ್ರದೆಶಗಳಾದ ಮಾರುಕಟ್ಟೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಧಾರ್ಮಿಕ ಕೆಂದ್ರಗಳ ಮೇಲೆ ಉಗ್ರರು ದಾಳಿ ನಡೆಸುವ ಹಾಗೆಯೇ ಕೋಮು ಸಾಮರಸ್ಯ ಕದಡುವಂತ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಇಂತಹ ಸ್ಥಳಗಳಲ್ಲಿ ಹೆಚ್ಚವರಿ ರಕ್ಷಣಾ ತಂಡಗಳನ್ನು ನಿಯೋಜಿಸಬೇಕೆಂದು ಕೇಂದ್ರ ಗೃಹಸಚಿವಾಲಯ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ.

ನವದೆಹಲಿ(ಅ.10): ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಉಗ್ರರ ದಾಳಿ ನಡೆಸುವ ಸಾಧ್ಯತೆಗಳಿದ್ದು ಈ ಕುರಿತಂತೆ ರಾಜ್ಯಗಳು ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನನಿಭಿಡ ಪ್ರದೆಶಗಳಾದ ಮಾರುಕಟ್ಟೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಧಾರ್ಮಿಕ ಕೆಂದ್ರಗಳ ಮೇಲೆ ಉಗ್ರರು ದಾಳಿ ನಡೆಸುವ ಹಾಗೆಯೇ ಕೋಮು ಸಾಮರಸ್ಯ ಕದಡುವಂತ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಇಂತಹ ಸ್ಥಳಗಳಲ್ಲಿ ಹೆಚ್ಚವರಿ ರಕ್ಷಣಾ ತಂಡಗಳನ್ನು ನಿಯೋಜಿಸಬೇಕೆಂದು ಕೇಂದ್ರ ಗೃಹಸಚಿವಾಲಯ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ.

ಸರ್ಜಿಕಲ್ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಹೊಂಚುಹಾಕುತ್ತಿದ್ದು ಜನನಿಭಿಡ ಪ್ರದೇಶಗಳಲ್ಲಿ ಶಾಂತಿ ಕದಡುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ಎಚ್ಚರಿಕೆ ನೀಡಿತ್ತು.

ದಸರಾ, ದುರ್ಗಾ ಪೂಜೆ, ಮೊಹರಮ್ ಹಬ್ಬಗಳಿರುವುದರಿಂದ ದೇಶದ ಪ್ರಮುಖ ನಗರಗಳಾದ ಡೆಲ್ಲಿ, ಮುಂಬೈ, ಕೋಲ್ಕತಾ, ಚೆನ್ನೈ, ಬೆಂಗಳೂರು ಹಾಗೂ ಹೈದರಾಬಾದ್'ನಲ್ಲಿ ಹೆಚ್ಚು ಕಟ್ಟೆಚ್ಚರ ವಹಿಸಬೇಕು ಎಂದು ಗೃಹಸಚಿವಾಲಯ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.