ಸ್ವಚ್ಛ ಭಾರತ ಅಭಿಯಾನದಡಿ ಮುಂದಿನ ಆರ್ಥಿಕ ವರ್ಷದ ಅಂತ್ಯದೊಳಗೆ ಮದ್ರಸಾಗಳಲ್ಲಿ 1 ಲಕ್ಷ ಶೌಚಾಲಯ ನಿರ್ಮಿಸಲಾಗುವುದು- ಕೇಂದ್ರ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ

ನವದೆಹಲಿ(ಮಾ.19): ದೇಶದಾದ್ಯಂತ ಇರುವ ಸಾಂಪ್ರದಾಯಿಕ ಕಲಿಕಾ ಕೇಂದ್ರಗಳಾದ ಮದ್ರಸಾಗಳಲ್ಲಿ 1 ಲಕ್ಷ ಶೌಚಾಲಯಗಳನ್ನು ನಿರ್ಮಿಸುವುದಾಗಿ ಕೇಂದ್ರ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಹೇಳಿದ್ದಾರೆ.

ಶೌಚಾಲಯಗಳ ಜತೆಗೆ ಸಾಂಪ್ರದಾಯಿಕ ಕಲಿಕಾ ಕೇಂದ್ರಗಳಲ್ಲಿ ಮಧ್ಯಾಹ್ನ ಬಿಸಿಯೂಟ, ಶಿಕ್ಷಕರ ಕೌಶಲ್ಯ ಅಭಿವೃದ್ಧಿ ಮಾಡುವ ಗುರಿಯನ್ನು ಹೊಂದಲಾಗಿದೆ.

ದೇಶಾದ್ಯಂತ ಮದ್ರಸಾಗಳಲ್ಲಿ ‘3ಟಿ' (ಟಿ-ಟೀಚ​ರ್ಸ್, ಟಿಫನ್‌, ಟಾಯ್ಲೆಟ್‌) ಫಾರ್ಮಲಾ ಅನುಷ್ಠಾನ ಗೊಳಿಸಲಾಗುವುದು. ಸ್ವಚ್ಛ ಭಾರತ ಅಭಿಯಾನದಡಿ ಮುಂದಿನ ಆರ್ಥಿಕ ವರ್ಷದ ಅಂತ್ಯದೊಳಗೆ ಮದ್ರಸಾಗಳಲ್ಲಿ 1 ಲಕ್ಷ ಶೌಚಾಲಯ ನಿರ್ಮಿಸಲಾಗುವುದೆಂದಿದ್ದಾರೆ.