ರೈಲು ತಡವಾಗುವುದಕ್ಕೆ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಸುರೇಶ್ ಪ್ರಭು ಎಚ್ಚರಿಕೆ
ರೈಲು ತಡವಾಗಿ ಹೊರಡುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿರುವುದರ ಹಿನ್ನೆಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಯಪಾಲನೆ ಮಾಡಿ ಇಲ್ಲದಿದ್ದರೆ ಕ್ರಮ ಎದುರಿಸಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ (ಏ.18): ರೈಲು ತಡವಾಗಿ ಹೊರಡುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿರುವುದರ ಹಿನ್ನೆಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಯಪಾಲನೆ ಮಾಡಿ ಇಲ್ಲದಿದ್ದರೆ ಕ್ರಮ ಎದುರಿಸಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ಪಾಳಿಯಲ್ಲಿರುವ ಆಯಾವಲಯದ ಹಿರಿಯ ಅಧಿಕಾರಿಗಳಿಗೆ ಸಮಸ್ಯೆಗಳ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ. ರೈಲು ತಡವಾಗಿ ಹೊರಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ಕಳೆದ ವರ್ಷ ಸಮಯಪಾಲನೆ ದರವು ಶೇ.84 ರಷ್ಟಿದ್ದು, ಈ ವರ್ಷ ಶೇ.79 ಕ್ಕೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 5 ರಷ್ಟು ಕುಸಿದಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುರೇಶ್ ಪ್ರಭು, ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.