ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಬಗ್ಗೆ ಇದೀಗ ಸಿಎಂ ಮಾಜಿ ಆಪ್ತರೋರ್ವರು ಟೀಕಾ ಪ್ರಹಾರ ನಡೆಸಿದ್ದಾರೆ. ಸಮಸ್ಯೆ ಬಗೆಹರಿಸುವುದು ಬಿಟ್ಟು ಈ ರೀತಿ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಮಂಡ್ಯ : ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಇದೊಂದು ರಾಜಕೀಯ ಸ್ಟಂಟ್ ಎಂದು ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ. 

Add Asianetnews Kannada as a Preferred SourcegooglePreferred

ಗ್ರಾಮ ವಾಸ್ತವ್ಯದಿಂದ ಯಾವುದೇ ಬದಲಾವಣೆಗಳೂ ಆಗದು. ಕೆಲ ಮಾಡುವ ಮೂಲಕ ಜನರ ಹತ್ತಿರ ತೆರಳಬೇಕೆ ಹೊರತು, ಈ ರೀತಿ ಗ್ರಾಮ ವಾಸ್ತವ್ಯದಿಂದ ಒಂದಿಬ್ಬರು ಬಡವರನ್ನು ಮಾತನಾಡಿಸಿ ಅಲ್ಲ ಸಂಪೂರ್ಣ ರಾಜ್ಯದ ಬಡತನ ನಿವಾರಣೆ ಮಾಡುವ ಯತ್ನ ಮಾಡಬೇಕು ಎಂದರು. 

ಸಂಕಷ್ಟದಲ್ಲಿ ಇರುವವರಿಗೆ ಅನುಕೂಲವಾಗುವಂತಹ ಕಾರ್ಯಕ್ರಮ ಮಾಡಬೇಕು. ಅದನ್ನು ಬಿಟ್ಟು ಸಿಕ್ಕ ಸಿಕ್ಕ ಕಡೆ ಫೋಟೋ ತೆಗೆಸಿಕೊಂಡು ಸಹಾಯ ಮಾಡಿದ್ದಾಹಿ ಹೇಳಿಕೊಳ್ಳುವುದಲ್ಲ ಎಂದಿ ಚೆಲುವರಾಯಸ್ವಾಮಿ ಹೇಳಿದರು. 

ರಾಜ್ಯದ ಮುಖ್ಯಮಂತ್ರಿಯಾಗಿ ಸಹಾಯ ಮಾಡುವುದು ದೊಡ್ಡಸ್ತಿಕೆ ಅಲ್ಲ. ಸಿಎಂ ಆದವರು ಈ ನಾಡಿನ 6 ಕೋಟಿ ಜನರಿಗೂ ಸಹಾಯವಾಗುವಂತೆ ಕೆಲಸ ಮಾಡಬೇಕು. ಈ ರೀತಿಯ ಗ್ರಾಮ ವಾಸ್ತವ್ಯದಿಂದ ಖಂಡಿತಾ ಯಾವು ಪ್ರಯೋಜನವಿಲ್ಲ ಎಂದು ಸಿಎಂ ಮಾಜಿ ಆಪ್ತ ಚೆಲುವರಾಯಸ್ವಾಮಿ ಗುಡುಗಿದರು.