Asianet Suvarna News Asianet Suvarna News

ಆರ್ಥಿಕತೆ ಚಿಂತೆ: ಜೈಲಿಗೆ ಹೊರಡುವ ಮುನ್ನ ಚಿದಂಬರಂ ಹೀಗಂದ್ರಂತೆ!

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಪಿ ಚಿದಂಬರಂ| ತಿಹಾರ್ ಜೈಲಿಗೆ ಪಿ. ಚಿದಂಬರಂ| ಸಿಬಿಐ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನಲೆ| ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿನಲ್ಲಿರಲಿದ್ದಾರೆ ಚಿದಂಬರಂ| ದೇಶದ ಅರ್ಥ ವ್ಯವಸ್ಥೆ ಬಗ್ಗೆ ಚಿಂತಾಕ್ರಾಂತರಾಗಿದ್ದಾರಂತೆ ಚಿದಂಬರಂ | ಶೇ.5ರಷ್ಟು ಎಂದು ಬೆರಳು ತೋರಿ ವ್ಯಂಗ್ಯವಾಡಿದ ಚಿದಂಬರಂ|

Chidambaram Says He Is Worried About Economy After Being Sent to Tihar Jail
Author
Bengaluru, First Published Sep 6, 2019, 3:47 PM IST

ನವದೆಹಲಿ(ಸೆ.06): ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ದೆಹಲಿ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಈಗಾಗಲೇ ತಿಹಾರ್ ಜೈಲಿನ ವಿಶೇಷ ಸೆಲ್’ನಲ್ಲಿರುವ ಚಿದಂಬರಂ, ಮುಂದಿನ 14 ದಿನಗಳನ್ನು ಜೈಲಿನಲ್ಲೇ ಕಳೆಯಲಿದ್ದಾರೆ.

ಈ ಮಧ್ಯೆ ದೆಹಲಿ ವಿಶೇಷ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ ಬಳಿಕ ಹೊರಬಂದ ಚಿದಂಬರಂ, ಈ ಕುರಿತು ಕೇಳಲಾದ ಪ್ರಶ್ನೆಗೆ ತಾವು ದೇಶದ ಅರ್ಥ ವ್ಯವಸ್ಥೆ ಬಗ್ಗೆ ಮಾತ್ರ ಚಿಂತಾಕ್ರಾಂತರಾಗಿರುವುದಾಗಿ ಮಾರ್ಮಿಕವಾಗಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಜೈಲಿಗೆ ಹೋಗುತ್ತಿರುವುದರ ಕುರಿತು ತಾವು ತಲೆ ಕೆಡಿಸಿಕೊಳ್ಳುತ್ತಿಲ್ಲ, ಬದಲಿಗೆ ದೇಶದ ಅರ್ಥ ವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು  ಈ ಕುರಿತು ಚಿಂತಾಕ್ರಾಂತರಾಗಿರುವುದಾಗಿ ಚಿದಂಬರಂ ಹೇಳಿದ್ದಾರೆ.

ಪತ್ರಕರ್ತರ ಮುಂದೆ ಶೇ.5 ಎಂದು ಬೆರಳು ಮಾಡಿ ತೋರಿದ ಚಿದಂಬರಂ, ಮೋದಿ ಸರ್ಕಾರದ ಜಿಡಿಪಿ ಬೆಳವಣಿಗೆಯನ್ನು  ವ್ಯಂಗ್ಯವಾಡಿದರು. ದೇಶದ ಜಿಡಿಪಿ ಕಳೆದ 6 ವರ್ಷದಲ್ಲೇ ಅತ್ಯಂತ ಕಡಿಮೆ ದಾಖಲಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

Follow Us:
Download App:
  • android
  • ios