ಸ್ಯಾಂಡಲ್ ವುಡ್ ನಟ ಸುದೀಪ್ ಗೆ ಚಿಕ್ಕಮಗಳೂರು JMFC ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ವಾರಸ್ದಾರ ಧಾರವಾಹಿ ಚಿತ್ರೀಕರಣ ಬಾಡಿಗೆ ಹಣ ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. 

ಚಿಕ್ಕಮಗಳೂರು : ಧಾರಾವಾಹಿ ಚತ್ರೀಕರಣದ ಬಾಡಿಗೆ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ವಾರಸ್ದಾರಾ ಧಾರಾವಾಹಿಗೆ ಮನೆ ಪಡೆದು ಬಾಡಿಗೆ ನೀಡದ ಪ್ರಕರಣ ಸಂಬಂಧ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ. 

Add Asianetnews Kannada as a Preferred SourcegooglePreferred

ದೀಪಕ್ ಮಯೂರ್ ಎಂಬುವವರು ನೀಡಿದ ದೂರಿನ ಸಂಬಂಧ ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಸಮನ್ಸ್ ನೀಡಲಾಗಿದೆ. 

ನಟ ಸುದೀಪ್ ನಿರ್ಮಾಣದ ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕೆ ದೀಪಕ್ ಮಯೂರ್ ಎನ್ನುವವರು ಮನೆ, ತೋಟ ಬಾಡಿಗೆ ನೀಡಿದ್ದರು. ಈ ವೇಳೆ ತೋಟ ಹಾಗೂ ಮನೆ ನಾಶ ಮಾಡಿದ್ದಾರೆ. ಅಲ್ಲದೇ ಬಾಡಿಗೆ ಹಣ ನೀಡಿಲ್ಲ ಎಂದು ದೀಪಕ್ ದೂರು ನೀಡಿದ್ದರು.

ಈ ಪ್ರಕರಣ ಸಂಬಂಧ ನಡೆದ ವಿಚಾರಣೆಗೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ ನಟ ಸುದೀಪ್ ಗೈರಾಗಿದ್ದು, ಈ ನಿಟ್ಟಿನಲ್ಲಿ ಸಮನ್ಸ್ ನೀಡಲಾಗಿದೆ. ಅಲ್ಲದೇ ಇದೀಗ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಟ ಸುದೀಪ್ ಗೆ ಕೋರ್ಟ್ ಸಮನ್ಸ್ ನಲ್ಲಿ ತಿಳಿಸಲಾಗಿದೆ.