ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಕಳವು ಮಾಡಿ ಸೌದಿ ರಾಷ್ಟ್ರಗಳಿಗೆ ಮಾರಟ ಮಾಡುತಿದ್ದ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ನಗರದಲ್ಲಿ ಇದೇ ತಿಂಗಳ 5ನೇ ತಾರಿಖಿನಂದು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್​ ಆಗಿದ್ದ ಮಗುವನ್ನು ರಕ್ಷಿಸುವುದರ ಜೊತೆಗೆ ಪ್ರಕರಣ ಭೇದಿಸಿರುವ ಪೊಲೀಸರು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಶಿವಾಜಿನಗರದಲ್ಲಿ ಬಂಧಿಸಿದ್ದಾರೆ.

ಬೆಂಗಳೂರು(ಅ.13): ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಕಳವು ಮಾಡಿ ಸೌದಿ ರಾಷ್ಟ್ರಗಳಿಗೆ ಮಾರಟ ಮಾಡುತಿದ್ದ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ನಗರದಲ್ಲಿ ಇದೇ ತಿಂಗಳ 5ನೇ ತಾರಿಖಿನಂದು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್​ ಆಗಿದ್ದ ಮಗುವನ್ನು ರಕ್ಷಿಸುವುದರ ಜೊತೆಗೆ ಪ್ರಕರಣ ಭೇದಿಸಿರುವ ಪೊಲೀಸರು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಶಿವಾಜಿನಗರದಲ್ಲಿ ಬಂಧಿಸಿದ್ದಾರೆ.

ಇನ್ನು ಕಳೆದ ಎಂಟು ದಿನಗಳ ಹಿಂದೆ ಕಿಡ್ನಾಪ್​ ಆಗಿದ್ದ ಮಗುವಿನ ಪತ್ತೆಗಾಗಿ ಮೂರು ವಿಶೇಷ ತಂಡಗಳ ರಚನೆ ಮಾಡಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲಿಸರಿಗೆ ಸಿಕ್ಕ ಸಿಸಿಟಿವಿ ಆಧರಿಸಿ ಆರೋಪಿಗಳ ಪತ್ತೆ ಮಾಡಿದ ಪೊಲೀಸರಿಗೆ ಆಘಾತಕಾರಿ ಸಂಗತಿ ತಿಳಿದು ಬಂದಿದ್ದು, ಮಕ್ಕಳನ್ನು ಕಿಡ್ನಾಪ್​ ಮಾಡುವ ಜಾಲದಲ್ಲಿ ಸಕ್ರಿಯವಾಗಿದ್ದ ಈ ಮಂದಿ ಕಂಡವರ ಮಕ್ಕಳನ್ನು ಕದ್ದು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುತಿದ್ದರು ಎಂಬ ಕರಾಳ ಸಂಗತಿ ಹೊರಬಂದಿದೆ.

ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಗ್ಯಾಂಗ್​ ಹಿಂದಿನ ದೊಡ್ಡ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.