ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಉಚಿತ ಸಮವಸ್ತ್ರ ಅಂತ ಕೋಟ್ಯಾಂತರ ಹಣ ಬಿಡುಗಡೆ ಮಾಡುತ್ತಿದೆ. ಆದರೆ ವಿದ್ಯಾರ್ಥಿಗಳ ಕೈಗೆ ತಲುಪುತ್ತಿರುವುದು ಮಾತ್ರ ಅರೆಕಾಸಿನ ಮಜ್ಜಿಗೆ. ಇದಕ್ಕೆ ಸಾಕ್ಷಿ ಚಿಕ್ಕಮಗಳೂರಿನ ಸರ್ಕಾರಿ ಶಾಲೆಗಳು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಫಿ ನಾಡಿನ ಮಕ್ಕಳು ಪರಿತಪಿಸುತ್ತಿದ್ದಾರೆ. 

ಚಿಕ್ಕಮಗಳೂರು(ಜು.06): ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಉಚಿತ ಸಮವಸ್ತ್ರ ಅಂತ ಕೋಟ್ಯಾಂತರ ಹಣ ಬಿಡುಗಡೆ ಮಾಡುತ್ತಿದೆ. ಆದರೆ ವಿದ್ಯಾರ್ಥಿಗಳ ಕೈಗೆ ತಲುಪುತ್ತಿರುವುದು ಮಾತ್ರ ಅರೆಕಾಸಿನ ಮಜ್ಜಿಗೆ. ಇದಕ್ಕೆ ಸಾಕ್ಷಿ ಚಿಕ್ಕಮಗಳೂರಿನ ಸರ್ಕಾರಿ ಶಾಲೆಗಳು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಫಿ ನಾಡಿನ ಮಕ್ಕಳು ಪರಿತಪಿಸುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೇಸಿಗೆ ರಜೆ ಮುಗಿಸಿದ ಮಕ್ಕಳು ಶಾಲೆಯತ್ತ ಮುಖಮಾಡಿ ತಿಂಗಳು ಕಳೆಯುತ್ತಾ ಬಂದರೂ ಪಠ್ಯ ಪುಸ್ತಕಗಳು ಮಾತ್ರ ಇನ್ನೂ ಕೈ ಸೇರಿಲ್ಲ. ಚಿಕ್ಕಮಗಳೂರಿನ ಸರ್ಕಾರಿ ಶಾಲೆಗಳಲ್ಲಿ ಪುಸ್ತಕವಿಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು ಪರದಾಡುವಂತಾಗಿದೆ. ತಿಂಗಳೂ ಕಳೆಯುತ್ತಾ ಬಂದರೂ ಏನನ್ನು ಕಲಿಸಬೇಕೆಂದು ತೋಚದೆ ಶಿಕ್ಷಕರೂ ತಬ್ಬಿಬ್ಬಾಗಿದ್ದಾರೆ. ಇನ್ನೂ ಶಾಲೆ ತಲುಪಿರುವ ಕೆಲವು ಪುಸ್ತಕಗಳ ಹಾಳೆಗಳು ಗುಣಮಟ್ಟವೇ ಇಲ್ಲದೆ ಅಕ್ಷರಗಳನ್ನೂ ಓದಲೂ ಆಗುತ್ತಿಲ್ಲ.

ಪುಸ್ತಕಗಳ ಕಥೆ ಇಷ್ಟಾದರೆ. ಉಚಿತವಾಗಿ ನೀಡಿರುವ ಯೂನಿಫಾರ್ಮ್​'ನಲ್ಲೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಶಾಲೆಯಲ್ಲಿ ಕೊಟ್ಟಿರುವ ಬಟ್ಟೆಗೆ ಗುಣಮಟ್ಟವೇ ಇಲ್ಲ. ಬಟ್ಟೆ ತೆಳುವಾಗಿದ್ದು ಸೊಳ್ಳೆಪರದೆಯಂತೆ ಕಾಣುತ್ತಿದೆ. ಬಟ್ಟೆ ನೋಡಿದ ಪೋಷಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಗುಣಮಟ್ಟವಿಲ್ಲದ ಪುಸ್ತಕ, ಸಮವಸ್ತ್ರಗಳನ್ನು ಉಚಿತವಾಗಿ ನೀಡಿದರೆ ಏನೂ ಪ್ರಯೋಜನ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿ ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲವಾದರೆ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಿಂದ ದೂರವಾಘುವುದು ಖಚಿತ.