ಚೀನಾ, ಅಪರೂಪಕ್ಕೆ ಎಂಬಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗದಲ್ಲಿ ಮೋದಿ ತಮ್ಮ ಭಾಷಣದಲ್ಲಿ ಆರ್ಥಿಕ ರಕ್ಷಣಾ ನೀತಿ ಭಯೋತ್ಪಾದನೆಯಷ್ಟೇ ಅಪಾಯಕಾರಿ ಎಂದು ಪ್ರತಿಪಾದಿಸಿದ್ದರು. ಅವರ ಈ ನಿಲುವನ್ನು ಚೀನಾ ಸ್ವಾಗತಿಸಿದೆ.

ಬೀಜಿಂಗ್: ಚೀನಾ, ಅಪರೂಪಕ್ಕೆ ಎಂಬಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗದಲ್ಲಿ ಮೋದಿ ತಮ್ಮ ಭಾಷಣದಲ್ಲಿ ಆರ್ಥಿಕ ರಕ್ಷಣಾ ನೀತಿ ಭಯೋತ್ಪಾದನೆಯಷ್ಟೇ ಅಪಾಯಕಾರಿ ಎಂದು ಪ್ರತಿಪಾದಿಸಿದ್ದರು. ಅವರ ಈ ನಿಲುವನ್ನು ಚೀನಾ ಸ್ವಾಗತಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಮೋದಿ ಅವರು ತಮ್ಮ ಭಾಷಣದಲ್ಲಿ ಆರ್ಥಿಕ ರಕ್ಷಣಾ ನೀತಿಯಿಂದಾಗುವ ಅಪಾಯದ ಬಗ್ಗೆ ವಿವರಿಸಿದ್ದಾರೆ. ಜಾಗತೀಕರಣ ಇಂದಿನ ಪ್ರವೃತ್ತಿ ಎಂದು ಅವರು ಪ್ರತಿಪಾದಿಸಿದ್ದಾರೆ. ಅಭಿವೃದ್ಧಿ ಹೊಂದಿದ ದೇಶಗಳೂ ಸೇರಿದಂತೆ ಎಲ್ಲಾ ದೇಶಗಳು ಆರ್ಥಿಕ ರಕ್ಷಣಾ ನೀತಿಯ ವಿರುದ್ಧ ಹೋರಾಡಬೇಕಿದೆ. ಈ ನಿಟ್ಟಿನಲ್ಲಿ ಚೀನಾ ಭಾರತದೊಂದಿಗೆ ಕಾರ್ಯನಿರ್ವಹಿಸಲು ಬಯಸುತ್ತದೆ ’ ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರೆ ಹುವಾಚುನೈಯಿಂಗ್ ತಿಳಿಸಿದ್ದಾರೆ.

ಜಾಗತೀಕರಣದ ಅತಿದೊಡ್ಡ ಪ್ರಯೋಜನವನ್ನು ಚೀನಾ ಪಡೆದುಕೊಳ್ಳುತ್ತಿದ್ದು, ಕಳೆದ ಮೂರು ದಶಕಗಳಿಂದ ವಿಶ್ವದ ಕಾರ್ಖಾನೆ ಎನಿಸಿಕೊಂಡಿದೆ.