ಅಗತ್ಯ ಬಿದ್ದರೆ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿಯ ವಿಚಾರಣೆಯೂ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಳ್ಳಾರಿ (ಡಿ.20): ಅಮಾನತಾಗಿರುವ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ಚುರುಕುಗೊಂಡಿದೆ.
ಬೆಂಗಳೂರಿನಲ್ಲಿ ಸಂಸದ ಶ್ರೀರಾಮುಲು ಗನ್'ಮ್ಯಾನ್ ಚನ್ನಬಸವ ವಿಚಾರಣೆ ನಡೆಸಲಾಗುತ್ತಿದೆ. ಬ್ಲ್ಯಾಕ್ ಅಂಡ್ ವೈಟ್ ಮನಿ ದಂಧೆ ವಿಚಾರವಾಗಿ ಸಿಐಡಿ ವಿಚಾರಣೆ ನಡೆಸುತ್ತಿದ್ದು, ಅಗತ್ಯ ಬಿದ್ದರೆ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿಯ ವಿಚಾರಣೆಯೂ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಶ್ರೀರಾಮುಲು ಗನ್'ಮ್ಯಾನ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಈಗಾಗಲೇ ನೀಡಲಾಗಿದೆ.
