ಚಿಕ್ಕಮಗಳೂರು(ಅ.5): ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ತೇಜಸ್ ಗೌಡನ ಅಪಹರಣ ಪ್ರಕರಣದ ಕುರಿತು ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಚಾರ್ಚ್​ ಶೀಟ್ ಸಲ್ಲಿಸಿದ್ದಾರೆ. ಹಣಕ್ಕಾಗಿ ತೇಜಸ್ ಗೌಡ ಕಿಡ್ನಾಪ್ ಪ್ರಕರಣದ ನಾಲ್ಕನೇ ಆರೋಪಿ ಡಿವೈಎಸ್ಪಿ ಕಲ್ಲಪ್ಪ'ಗೆ ಕ್ಲೀನ್ ಚೀಟ್ ನೀಡಲಾಗಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ. ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ನಿರ್ದೋಷಿ ಎಂದು ಚಾರ್ಜ್​ ಶೀಟ್ ಸಲ್ಲಿಕೆಯಾಗಿದೆ ಎನ್ನುವ ಮಾಹಿತಿ ಹೊರಬಂದಿದೆ. ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರು ಜೆಎಂಎಫ್ ಸಿ ಕೋರ್ಟ್​ ಗೆ ಚಾರ್ಜ್​ ಶೀಟ್ ಸಲ್ಲಿಸಿರೋದನ್ನ ಆರೋಪಿ ಪ್ರವೀಣ್ ಖಾಂಡ್ಯ ಪರ ವಕೀಲ ರವೀಂದ್ರ ದೃಢಪಡಿಸಿದ್ದಾರೆ. ಅಲ್ಲದೆ ಪ್ರಕರಣದ 9 ಆರೋಪಿಗಳ ವಿರುದ್ಧ ಚಾರ್ಜ್​ ಶೀಟ್ ಸಲ್ಲಿಕೆಯಾಗಿದ್ದು 400 ಪುಟಗಳ ವರದಿಯಲ್ಲಿ ಸಿಐಡಿ ಅಧಿಕಾರಿಗಳು ಸಲ್ಲಿಸಿದ್ದಾರೆ.