ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರ ನಿರ್ಧಾರ
ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನದಲ್ಲಿ 2016-17ಕ್ಕೆ ಹೋಲಿಸಿದರೆ ತಿಂಗಳಿಗೆ ರೂ.2000 ಸಾವಿರ, ಸಹಾಯಕಿಯರಿಗೆ ರೂ. 1000 ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು (ಏ.10): ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ಸರ್ಕಾರವು ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಕಾರ್ಯಕರ್ತೆಯರು, ಸಹಾಯಕಿಯರ ವೇತನದಲ್ಲಿ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನದಲ್ಲಿ 2016-17ಕ್ಕೆ ಹೋಲಿಸಿದರೆ ತಿಂಗಳಿಗೆ ರೂ.2000 ಸಾವಿರ, ಸಹಾಯಕಿಯರಿಗೆ ರೂ. 1000 ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ತಿಂಗಳು ಅಹೋರಾತ್ರಿ ಧರಣಿ ನಡೆಸುವ ಮೂಲಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ದೇಶದಾದ್ಯಂತ ಗಮನ ಸೆಳೆದಿದ್ದರು . ಉಪ ಚುನಾವಣೆ ಮುಗಿಯುತ್ತಿದ್ದಂತೆ ಬೇಡಿಕೆ ಈಡೇರಿಸುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದರು .
ಒಂದುವಾರಗಳ ಕಾಲ ಅಹೋರಾತ್ರಿ ಧರಣಿ ನಡೆಸಿದ್ದ ಕಾರ್ಯಕರ್ತೆಯರು , ಕನಿಷ್ಠ ವೇತನ ಹೆಚ್ಚಳ, ಮತ್ತು ಕೆಲಸದ ಸಮಯ ಕಡಿತಗೊಳಿಸುವಂತೆ ಆಗ್ರಹಿಸಿದ್ದರು.