ಆದರೆ, ಇದನ್ನು ಸಿದ್ದರಾಮಯ್ಯ ಹಾಗೂ ದೇವೇಗೌಡರ ಆಪ್ತ ಬಳಗ ನಿರಾಕರಿಸುತ್ತವೆ. ಈ ಕಾರ್ಯಕ್ರಮಕ್ಕೆ ಇಬ್ಬರಿಗೂ ಆಹ್ವಾನವಿರುವುದು ನಿಜ. ಆದರೆ, ಇಬ್ಬರೂ ನಾಯಕರು ಪ್ರತ್ಯೇಕ ಹೆಲಿಕಾಪ್ಟರ್‌ಗಳಲ್ಲಿ ತೆರಳಲಿದ್ದಾರೆ ಎಂದು ಸಿಎಂ ಆಪ್ತ ಮೂಲ ಹೇಳಿದರೆ, ದೇವೇಗೌಡರು ಈ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್‌ ಮೂಲಕ ತೆರಳುವ ಮಾಹಿತಿಯಿದೆ. ಆದರೆ, ಈ ಯೋಜನೆ ಕಡೆ ಕ್ಷಣದಲ್ಲಿ ರದ್ದಾದರೂ ರದ್ದಾಗಬಹುದು.

ದಶಕಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಒಂದೇ ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಬೆಳೆಸಲಿದ್ದಾರೆಯೇ?

Add Asianetnews Kannada as a Preferred SourcegooglePreferred

ಉಡುಪಿ ಜಿಲ್ಲೆಯ ಭಾರ್ಗವ ಬೀಡುವಿನಲ್ಲಿ ಶ್ರೀ ಬಾರ್ಕೂರು ಮಹಾಸಂಸ್ಥಾನಂ ಟ್ರಸ್ಟ್‌ ಆಯೋಜಿಸಿರುವ ಅಳಿಯಕಟ್ಟು ಪರಂಪರೆಯ ಸಮುದಾಯಗಳ ಶ್ರೀ ಸಂಸ್ಥಾನ ಲೋಕಾರ್ಪಣೆ ಉದ್ಘಾಟನಾ ಸಮಾರಂಭ ಶುಕ್ರವಾರ ಮಧ್ಯಾಹ್ನ 12ಕ್ಕೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದೇವೇಗೌಡ ಇಬ್ಬರಿಗೂ ಆಹ್ವಾನವಿದೆ. ಈ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಒಂದೇ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿ​ನಿಂದ ಉಡುಪಿಯ ಬಾರ್ಕೂರಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯೊಂದು ಇದೆ ಎಂದು ಉನ್ನತ ಮೂಲಗಳು ಹೇಳುತ್ತವೆ.

ಆದರೆ, ಇದನ್ನು ಸಿದ್ದರಾಮಯ್ಯ ಹಾಗೂ ದೇವೇಗೌಡರ ಆಪ್ತ ಬಳಗ ನಿರಾಕರಿಸುತ್ತವೆ.

ಈ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಒಂದೇ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿ​ನಿಂದ ಉಡುಪಿಯ ಬಾರ್ಕೂರಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯೊಂದು ಇದೆ ಎಂದು ಉನ್ನತ ಮೂಲಗಳು ಹೇಳುತ್ತವೆ.

ಆದರೆ, ಇದನ್ನು ಸಿದ್ದರಾಮಯ್ಯ ಹಾಗೂ ದೇವೇಗೌಡರ ಆಪ್ತ ಬಳಗ ನಿರಾಕರಿಸುತ್ತವೆ. ಈ ಕಾರ್ಯಕ್ರಮಕ್ಕೆ ಇಬ್ಬರಿಗೂ ಆಹ್ವಾನವಿರುವುದು ನಿಜ. ಆದರೆ, ಇಬ್ಬರೂ ನಾಯಕರು ಪ್ರತ್ಯೇಕ ಹೆಲಿಕಾಪ್ಟರ್‌ಗಳಲ್ಲಿ ತೆರಳಲಿದ್ದಾರೆ ಎಂದು ಸಿಎಂ ಆಪ್ತ ಮೂಲ ಹೇಳಿದರೆ, ದೇವೇಗೌಡರು ಈ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್‌ ಮೂಲಕ ತೆರಳುವ ಮಾಹಿತಿಯಿದೆ. ಆದರೆ, ಈ ಯೋಜನೆ ಕಡೆ ಕ್ಷಣದಲ್ಲಿ ರದ್ದಾದರೂ ರದ್ದಾಗಬಹುದು.

ಏಕೆಂದರೆ, ದೇವೇಗೌಡರು ತಮ್ಮ ಆತ್ಮಕಥೆ ರಚಿಸುತ್ತಿರುವ ಲೇಖಕರು ಹಾಗೂ ವಿದ್ವಾಂಸರೊಂದಿಗೆ ಮೈಸೂರಿನಲ್ಲಿ ಸಭೆಯೊಂದನ್ನು ಆಯೋಜಿಸಿದ್ದು, ಈ ಸಭೆಗೆ ಅವರು ತೆರಳುವ ಸಾಧ್ಯತೆ ಯೂ ಇದೆ ಎನ್ನುತ್ತವೆ. ಒಂದು ವೇಳೆ ದೇವೇಗೌಡ ಹಾಗೂ ಸಿದ್ದರಾಮಯ್ಯ ಅವರು ಒಂದೇ ಹೆಲಿಕಾಪ್ಟರ್‌ನಲ್ಲಿ ತೆರಳಿದರೆ, ದಶಕಗಳ ನಂತರ ಈ ನಾಯಕರು ಇಂತಹದೊಂದು ಪ್ರಯಾಣ ಮಾಡಿದಂತಾಗುತ್ತದೆ.