ನೂತನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜನಪ್ರಿಯ ಕಾರ್ಯಕ್ರಮ ಜನತಾದರ್ಶನಕ್ಕೆ ಬ್ರೇಕ್ ಹಾಕಲಾಗಿದೆ. ಒಂದೇ ತಿಂಗಳಿನಲ್ಲಿ ಜನತಾದರ್ಶನ ಕಾರ್ಯಕ್ರಮವನ್ನ ಸ್ಥಗಿತಗೊಳಿಸಿದ್ದೇಕೆ? ಇಲ್ಲಿದೆ ವಿವಿರ.

ಬೆಂಗಳೂರು(ಜೂನ್.11): ಕರ್ನಾಟಕದ ನೂತನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜನಪ್ರಿಯ ಕಾರ್ಯಕ್ರಮ ಜನತಾದರ್ಶನಕ್ಕೆ ಬ್ರೇಕ್ ಬಿದ್ದಿದೆ. ಬಜೆಟ್ ಮಂಡನೆಯಿಂದಾಗಿ ಜನತಾದರ್ಶನ ಕಾರ್ಯಕ್ರಮವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸೋದಾಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Scroll to load tweet…

ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಆಯವ್ಯದಲ್ಲಿ ಪಾಲ್ಗೊಳ್ಳೋ ಕಾರಣದಿಂದ ಜನತಾದರ್ಶನ ಹಾಗೂ ಸಾರ್ವಜನಿಕರ ಭೇಟಿಯನ್ನ ಮುಂದೂಡಲಾಗಿದೆ. 2006ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಆರಂಭಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನ ಇದೀಗ ಮತ್ತೆ ಆರಂಭಿಸಿದ್ದರು. ಆದರೆ ಜನಪ್ರಿಯ ಕಾರ್ಯಕ್ರಮಕ್ಕೆ ಮತ್ತೆ ಬ್ರೇಕ್ ಹಾಕಲಾಗಿದೆ.