ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ರಾಜೀನಾಮೆ ಪರ್ವದ ಈ ಸಂದರ್ಭದಲ್ಲಿ ಕುಮಾರಸ್ವಾಮಿ ಮುಂದೆ ಏನು ಮಾಡುತ್ತಾರೆ ಎಂಬ ಕುತೂಹಲ ಸಹಜವಾಗಿ ಎಲ್ಲರಲ್ಲಿದೆ.

ಬೆಂಗಳೂರು[ಜು. 07] ಎಂಟು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಸಿಎಂ ಕುಮಾರಸ್ವಾಮಿ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಹಾಗಾದರೆ ದೋಸ್ತಿ ಸರಕಾರ ಉಳಿಸಿಕೊಳ್ಳಲು ಸಿಎಂ ಯಾವೆಲ್ಲ ಕ್ರಮಕ್ಕೆ ಮುಂದಾಗಬಹುದು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1. ಅತೃಪ್ತರಿಗೆ ಮಂತ್ರಿಗಿರಿ:  ದೋಸ್ತಿ ಪಕ್ಷ ಕಾಂಗ್ರೆಸ್ ನೊಂದಿಗೆ ಸಭೆ ನಡೆಸಿ ಅತೃಪ್ತರಿಗೆ ಮಂತ್ರಿಗಿರಿ ನೀಡಿ ಬಂಡಾಯ ಶಮನ ಮಾಡಿ ಸರಕಾರ ಉಳಿಸಿಕೊಳ್ಳುವ ತೀರ್ಮಾನ ಮಾಡಬಹುದು.

‘ರಾಜೀನಾಮೆ ಪರ್ವ ಸಿದ್ದರಾಮಯ್ಯ ಗೇಮ್ ಪ್ಲ್ಯಾನ್’

2. ಸರಕಾರ ವಿಸರ್ಜನೆ: ಸರಕಾರ ವಿಸರ್ಜನೆ ಮಾಡಲು ರಾಜ್ಯಪಾಲರಿಗೆ ಮನವಿ ಮಾಡಿಕೊಳ್ಳಬಹುದು.

3. ಚುನಾವಣೆಗೆ ಹೋಗೋಣ: ಕಾಂಗ್ರೆಸ್ ಸಖ್ಯ ಕಡಿದುಕೊಂಡು ನೇರವಾಗಿ ಜನರ ಬಳಿಗೆ ಹೋಗೋಣ ಎಂದು ತಂದೆ ದೇವೇಗೌಡರ ಮಾತಿನಂತೆ ನಡೆದುಕೊಳ್ಳಬಹುದು.

4. ಉಳಿದ ಶಾಸಕರ ಮೇಲೆ ಹಿಡಿತ: ಪಕ್ಷದಲ್ಲಿ ಉಳಿದುಕೊಂಡಿರುವ ಶಾಸಕರು ಯಾವುದೇ ಕಾರಣಕ್ಕೂ ರಾಜೀನಾಮೆ ಕಡೆ ತೆರಳದಂತೆ ನೋಡಿಕೊಳ್ಳಬಹುದು.