Asianet Suvarna News Asianet Suvarna News

ರೈತರ ಸಾಲ ಮನ್ನಾ ಹಣ ರೀಫಂಡ್: ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಏಕಾಏಕಿ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಪಷ್ಟನೆ ಏನೋ ನೀಡಿದ್ದಾರೆ. ಆದರೆ, ಸ್ಪಷ್ಟನೆಯಲ್ಲಿ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ.

CM Kumaraswamy clarification about loan waiver refund case
Author
Bengaluru, First Published Jun 11, 2019, 5:21 PM IST

ಬೆಂಗಳೂರು, (ಜೂನ್.11): ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ಏಕಾಏಕಿ  ರೀಫಂಡ್ ಆಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. 

"

ಯಾದಗಿರಿ ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತೆ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ.

"

"

ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. 

ಈ ವರೆಗೆ 13,988 ರೈತರ ಸಾಲ ಖಾತೆಗಳಲ್ಲಿ ಈ ಗೊಂದಲ ಉಂಟಾಗಿದೆ. ಸ್ಥಳೀಯ ಬ್ಯಾಂಕುಗಳು ತಮ್ಮಿಂದ ಆಗಿರುವ ಲೋಪದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ, ಜೂನ್ 14ರಂದು ಮಧ್ಯಾಹ್ನ 2.30 ಗಂಟೆಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಭೆ ಕರೆಯಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Follow Us:
Download App:
  • android
  • ios