ರಾಜ್ಯದಲ್ಲಿ ಜನತಾ ದರ್ಶನ ಎಂಬ ಕಾನ್ಸೆಪ್ಟ್ ಮೂಲಕ ಜನರಿಗೆ ಹತ್ತಿರವಾದ ಮೊದಲ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು. ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಜನತಾ ದರ್ಶನದ ಮೂಲಕ ಜನರ ಸಮಸ್ಯೆಗಳನ್ನು ಆಲಿಸುವ ಪರಿಪಾಠ ಹಾಕಿ ಕೊಟ್ಟರು. ಅದರಂತೆ ಮುಂದೆ ಬಂದ ಮುಖ್ಯಮಂತ್ರಿಗಳೂ ಕೂಡ ಜನತಾ ದರ್ಶನ ಮುಂದುವರೆಸಿದ್ದರು.

ಬೆಂಗಳೂರು (ಮೇ. 24): ರಾಜ್ಯದಲ್ಲಿ ಜನತಾ ದರ್ಶನ ಎಂಬ ಕಾನ್ಸೆಪ್ಟ್ ಮೂಲಕ ಜನರಿಗೆ ಹತ್ತಿರವಾದ ಮೊದಲ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು. ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಜನತಾ ದರ್ಶನದ ಮೂಲಕ ಜನರ ಸಮಸ್ಯೆಗಳನ್ನು ಆಲಿಸುವ ಪರಿಪಾಠ ಹಾಕಿ ಕೊಟ್ಟರು. ಅದರಂತೆ ಮುಂದೆ ಬಂದ ಮುಖ್ಯಮಂತ್ರಿಗಳೂ ಕೂಡ ಜನತಾ ದರ್ಶನ ಮುಂದುವರೆಸಿದ್ದರು.

Add Asianetnews Kannada as a Preferred SourcegooglePreferred

ಇದೀಗ ಬದಲಾದ ಸನ್ನಿವೇಶದಲ್ಲಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಿದ್ದಾರೆ. ಅಲ್ಲದೇ ತಮ್ಮದೇ ಕಾನ್ಸೆಪ್ಟ್ ಆದ ಜನತಾ ದರ್ಶನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಭಾಯಿಸಲಿದ್ದಾರೆ ಎಂಬ ನಿರೀಕ್ಷೆ ಕೂಡ ಇದೆ. ಆದರೆ ಇಂದು ಮಧ್ಯಾಹ್ನ 2:30ಕ್ಕೆ ನಿಗದಿಯಾಗಿದ್ದ ಸಿಎಂ ಜನತಾ ದರ್ಶನ ರದ್ದಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಿಗದಿಯಾಗಿದ್ದ ಜನತಾ ದರ್ಶನಕ್ಕೆ ಕಾದು ಕಾದು ಜನಸಾಮ್ಯಾರು ಸುಸ್ತಾಗಿದ್ದಾರೆ.

ಸಿಎಂ ಭೇಟಿಗೆ ಕಾತರರಾಗಿದ್ದ ಜನ ಕಾರ್ಯಕ್ರಮ ಇಲ್ಲ ಎಂದು ಗೊತ್ತಾದ ಮೇಲೆ ಮನೆಯತ್ತ ಹೆಜ್ಜೆ ಹಾಕಿದರು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಸಿಎಂ ಅವರ ಆಪ್ತ ಮೂಲಗಳು ಕುಮಾರಸ್ವಾಮಿ ಅವರು ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಭಾಗವಹಿಸಿದ್ದರ ಪರಿಣಾಮ ಜನತಾ ದರ್ಶನಕ್ಕೆ ಬರಲಾಗಲಿಲ್ಲ ಎಂದು ಹೇಳಿದೆ. ಅಲ್ಲದೇ ಈ ಮೊದಲೇ ಹೇಳಿದಂತೆ ನಾಳೆ ಜನತಾ ದರ್ಶನಕಾರ್ಯಕ್ರಮ ನಡೆಸುವುದಾಗಿ ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.