ಸಿಎಂ ಎಸ್ ಜೆ ಸಿಐಟಿ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ಮೂಲಕ ಆಗಮಿಸಿದ್ದರು.

ಚಿಕ್ಕಬಳ್ಳಾಪುರ(ಅ.30): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಹರಿದ ಘಟನೆ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಈರೇದೇವರು, ಬೀರೆ ದೇವರ ದೇವಸ್ಥಾನಗಳ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಎಸ್ ಜೆ ಸಿಐಟಿ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ಮೂಲಕ ಆಗಮಿಸಿದ್ದರು. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಅಲ್ಲಿ ಹಾಕಿದ್ದ ಬ್ಯಾರಿಕೇಡ್'ಗಳಿಗೆ ಪಂಚೆ ಸಿಕ್ಕಿ ಹರಿದು ಹೋಯಿತು. ಬಳಿಕ ಆದಿಚುಂಚನಗಿರಿ ಮಠದಲ್ಲಿ ಹೊಸ ಪಂಚೆ ಹಾಕಿಕೊಂಡು ಕಾರ್ಯಕ್ರಮಕ್ಕೆ ತೆರಳಿದರು.