ಧಾರವಾಡದ ಹುತಾತ್ಮ ಯೋಧನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಛತ್ತೀಸ್ಗಢ ನಕ್ಸಲ್ ದಾಳಿಯಲ್ಲಿ ಹುತಾತ್ಮನಾದ ಧಾರವಾಡ ಯೋಧ ಮಂಜುನಾಥ್ ಜಕ್ಕನವರ್ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ₹25 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಬೆಂಗಳೂರು: ಛತ್ತೀಸ್ಗಢ ನಕ್ಸಲ್ ದಾಳಿಯಲ್ಲಿ ಹುತಾತ್ಮನಾದ ಧಾರವಾಡ ಯೋಧ ಮಂಜುನಾಥ್ ಜಕ್ಕನವರ್ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ₹25 ಲಕ್ಷ ಪರಿಹಾರ ಘೋಷಿಸಿದ್ದಾರೆ.
ವೀರಯೋಧ ಮಂಜುನಾಥ್ ಜಕ್ಕನವರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾವೋವಾದಿಗಳ ಗುಂಡಿನ ದಾಳಿಗೆ ಹುತಾತ್ಮರಾದ ಧಾರವಾಡದ ವೀರಯೋಧ ಮಂಜುನಾಥ್ ಜಕ್ಕನವರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು ಹಾಗೂ ಅವರ ಕುಟುಂಬಕ್ಕೆ ರೂ.೨೫ ಲಕ್ಷ ಪರಿಹಾರ ನೀಡಲಾಗುವುದು: @siddaramaiah
— CM of Karnataka (@CMofKarnataka) November 28, 2017
ಮಹಾರಾಷ್ಟ್ರ- ಛತ್ತೀಸ್ಗಢ ಗಡಿಯಲ್ಲಿರುವ ಸಿಆರ್ಪಿಎಫ್ ಶಿಬಿರದ ಮೇಲೆ ಭಾನುವಾರ ತಡರಾತ್ರಿ ನಡೆದ ನಕ್ಸಲ್ ದಾಳಿಯಲ್ಲಿ ಧಾರವಾಡ ಮೂಲದ ಮಂಜುನಾಥ್ ಜಕ್ಕನವರ್ (30) ಹುತಾತ್ಮರಾಗಿದ್ದಾರೆ.
ಧಾರವಾಡ ತಾಲೂಕಿನ ಮನಗುಂಡಿಯ ಮಂಜುನಾಥ ಶಿವಲಿಂಗಪ್ಪ ಜಕ್ಕನ್ನವರ ಛತ್ತೀಸ್ಗಢದಲ್ಲಿ ಸಿಆರ್ಪಿಎಫ್ನ 133 ಕೋಬ್ರಾ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮಹಾರಾಷ್ಟ್ರ- ಛತ್ತೀಸ್’ಗಢದ ಗಡಿ ಪ್ರದೇಶವಾದ ಗಡ್ಚಿರೋಲಿಯ ಧನೋರಾ ಬಳಿ ನಕ್ಸಲರ ಜೊತೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಗುಂಡು ತಗುಲಿ ಅವರು ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾದೇ ಮಂಜುನಾಥ ಮೃತಪಟ್ಟಿದ್ದಾರೆ.