ಚಾಮುಂಡೇಶ್ವರಿ ಕ್ಷೇತ್ರದಲ್ಲಿ  ಎರಡನೇ ದಿನ ಸಿಎಂ ಸಿದ್ದರಾಮಯ್ಯ  ಭರ್ಜರಿ  ಪ್ರಚಾರ ಕೈಗೊಂಡಿದ್ದಾರೆ.  ಇಲವಾಲ ಆನಂದೂರು ಹೋಬಳಿಯ 22 ಗ್ರಾಮಗಳಲ್ಲಿ  ಇಂದು ಸಿಎಂ ಮತ ಪ್ರಚಾರ ಕೈಗೊಳ್ಳಲಿದ್ದಾರೆ.  ಜಿ.ಟಿ.ದೇವೇಗೌಡ ತವರು ಗುಂಗ್ರಾಲ್ ಛತ್ರದಲ್ಲಿ ಮತಯಾಚಿಸಲಿದ್ದಾರೆ. 

ಮೈಸೂರು (ಮಾ. 31): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎರಡನೇ ದಿನ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇಲವಾಲ ಆನಂದೂರು ಹೋಬಳಿಯ 22 ಗ್ರಾಮಗಳಲ್ಲಿ ಇಂದು ಸಿಎಂ ಮತ ಪ್ರಚಾರ ಕೈಗೊಳ್ಳಲಿದ್ದಾರೆ. ಜಿ.ಟಿ.ದೇವೇಗೌಡ ತವರು ಗುಂಗ್ರಾಲ್ ಛತ್ರದಲ್ಲಿ ಮತಯಾಚಿಸಲಿದ್ದಾರೆ. 

Add Asianetnews Kannada as a Preferred SourcegooglePreferred

ಕಡೆಯ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಗೆಲ್ಲಲು ಸಿಎಂ ಕಸರತ್ತು ನಡೆಸುತ್ತಿದ್ದಾರೆ. ಚಾಮುಂಡೇಶ್ಚರಿ ಕ್ಷೇತ್ರಕ್ಕೆ 5 ದಿನ ಮೀಸಲಿಟ್ಟಿದ್ದಾರೆ. ಇದು ಅವರಿಗೆ ಪ್ರತಿಷ್ಠೆಯ ಪ್ರಶ್ನೆಯೂ ಹೌದಾಗಿದೆ. 
ಬೆಳಿಗ್ಗೆ 9 ಗಂಟೆಯಿಂದ ಚಾಮುಂಡೇಶ್ಚರಿ ಕ್ಷೇತ್ರವ್ಯಾಪ್ತಿಯ ಮೈದನಹಳ್ಳಿ, ಮೇಗಳಾಪುರ,ಮಲ್ಲೇಗೌಡನ ಕೊಪ್ಪಲು, ಉಂಡವಾಡಿ,ಚಿಕ್ಕನಹಳ್ಳಿ, ಆನಂದೂರು, ಕಲ್ಲೂರು ನಾಗನಹಳ್ಳಿ, ಕಲ್ಲೂರು,ಯಡಹಳ್ಳಿ, ರಾಮನಹಳ್ಳಿ, ಸಾಗರಕಟ್ಟೆ,ಯಲ್ಲಿ ಪ್ರಚಾರ.
ಮಧ್ಯಾಹ್ನ 2:30 ಕ್ಕೆ ಹೊಸ ಕೋಟೆಯಲ್ಲಿ ಊಟ ಸೇವಿಸಿದ ಬಳಿಕ,ಯಾಚೆಗೌಡನಹಳ್ಳಿ, ದಡದ ಕಲ್ಲಹಳ್ಳಿ,ರಟ್ಟನಹಳ್ಳಿ, ಪ್ರಚಾರ ಮುಗಿಸಿ ಜಿ.ಟಿ.ದೇವೇಗೌಡ ತವರು ಗುಂಗ್ರಾಲ್ ಛತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬಳಿಕ ನಾಗವಾಲ, ಇಲವಾಲದಲ್ಲಿ ರಾತ್ರಿ 9 ಗಂಟೆವರೆಗೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. 

ಸಿಎಂ ಸಿದ್ದರಾಮಯ್ಯಗೆ ಪುತ್ರ ಡಾ.ಯತೀಂದ್ರ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.