ಯಡಿಯೂರಪ್ಪನವರಿಗೆ ನಿಜವಾಗಿಯೂ ಬಸವಣ್ಣನವರ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇದ್ದರೆ ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ಬದಲು ದಲಿತ ಕುಟುಂಬಗಳ ಜೊತೆಗೆ ಕೌಟುಂಬಿಕ ಸಂಬಂಧಗಳನ್ನು ಬೆಳೆಸಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಬಳ್ಳಾರಿ: ಯಡಿಯೂರಪ್ಪನವರಿಗೆ ನಿಜವಾಗಿಯೂ ಬಸವಣ್ಣನವರ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇದ್ದರೆ ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ಬದಲು ದಲಿತ ಕುಟುಂಬಗಳ ಜೊತೆಗೆ ಕೌಟುಂಬಿಕ ಸಂಬಂಧಗಳನ್ನು ಬೆಳೆಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

Add Asianetnews Kannada as a Preferred SourcegooglePreferred

ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬಳ್ಳಾರಿ ಅಭಿವೃದ್ಧಿ ಹಾಗೂ ಸಾಮಾಜಿಕ ಸಾಧನಾ ಸಮಾವೇಶ ಮತ್ತು ₹2995 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಂಗಳವಾರ ಅವರು ಮಾತನಾಡಿದರು.