ಚಾಮುಂಡೇಶ್ವರಿಯಲ್ಲೇ ಸ್ಪರ್ಧೆ; ಎಚ್’ಡಿಕೆ ಕೇಳಿ ನಾನು ರಾಜಕಾರಣ ಮಾಡಬೇಕಿಲ್ಲ ಎಂದ ಸಿಎಂ
ಚಾಮುಂಡೇಶ್ವರಿ ಕ್ಷೇತ್ರದಲ್ಲೇ ನಾನು ಸ್ಪರ್ಧಿಸುತ್ತೇನೆ. ಕುಮಾರಸ್ವಾಮಿ ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಿಲ್ಲ ಎಂದು ಸಿಎಂ ಇಂದು ಮೈಸೂರಿನಲ್ಲಿ ಹೇಳಿದ್ದಾರೆ.
ಮೈಸೂರು (ಮಾ. 29): ಚಾಮುಂಡೇಶ್ವರಿ ಕ್ಷೇತ್ರದಲ್ಲೇ ನಾನು ಸ್ಪರ್ಧಿಸುತ್ತೇನೆ. ಕುಮಾರಸ್ವಾಮಿ ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಿಲ್ಲ ಎಂದು ಸಿಎಂ ಇಂದು ಮೈಸೂರಿನಲ್ಲಿ ಹೇಳಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಎಷ್ಟು ಸಲ ನಿಂತಿದ್ದೀನಿ ಅಂತ ಕುಮಾರಸ್ವಾಮಿಗೆ ಗೊತ್ತಾ? ನಾನು ಚಾಮುಂಡೇಶ್ವರಿಯಲ್ಲಿ 7 ಬಾರಿ ಸ್ಪರ್ಧಿಸಿದ್ದೇನೆ. 5 ಬಾರಿ ಗೆದ್ದಿದ್ದೇನೆ. 2 ಬಾರಿ ಸೋತಿದ್ದೇನೆ. ಚಾಮುಂಡೇಶ್ವರಿ ಕ್ಷೇತ್ರದಲ್ಲೇ ನನ್ನ ಸ್ಪರ್ಧೆ. ಯಾವುದೇ ಅನುಮಾನ ಬೇಡ. ಇಲ್ಲಿಯೇ ನಿಲ್ಲುತ್ತೇವೆ. ಚಾಮುಂಡೇಶ್ವರಿ ಕ್ಷೇತ್ರದ ಮೇಲೆ ನನಗೆ ನಂಬಿಕೆ ಇದೆ. ನಾನು ಮತ್ತೆ ಗೆಲ್ಲುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.