ಶರನ್ನವರಾತ್ರಿಯಲ್ಲಿ 9 ದಿನಗಳ ಕಾಲ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಸಿಎಂ ಪತ್ನಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು (ಸೆ.24): ಶರನ್ನವರಾತ್ರಿಯಲ್ಲಿ 9 ದಿನಗಳ ಕಾಲ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಸಿಎಂ ಪತ್ನಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Add Asianetnews Kannada as a Preferred SourcegooglePreferred

ಶರನ್ನವರಾತ್ರಿ ನಾಲ್ಕನೇ ದಿನವಾದ ಇಂದು ಭಕ್ತೆಯಾಗಿರುವ ಸಿಎಂ ಪತ್ನಿ ಶರನ್ನವರಾತ್ರಿ ಮೊದಲ ದಿನ ಚಾಮುಂಡಿ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಆಗಮಿಸುವ ಮೊದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರತಿ ದಿನವೂ ಬೆಂಗಳೂರಿನಿಂದ ಬೆಳಗ್ಗಯೇ ಬಂದು ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ನವರಾತ್ರಿಯ ಪೂಜೆ ಸಲ್ಲಿಸುತ್ತಿದ್ದು ಇಂದು ನಾಲ್ಕನೇ ದಿನವಾಗಿದ್ದು 9 ದಿನಗಳ ಕಾಲ ಪೂಜೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮುಂದಿನ ಬಾರಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ನವರಾತ್ರಿಯ ಪೂಜೆ ಕೈಗೊಂಡಿದ್ದಾರೆ ಎಂದು ಆಪ್ತ ಮೂಲಗಳು ಖಚಿತಪಡಿಸಿವೆ. ಇದಕ್ಕಾಗಿ ಪ್ರತಿ ದಿನ ಬೆಳಗ್ಗೆ ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಿಂದ ಹೊರಟು ಈ ನವರಾತ್ರಿ ಪೂಜೆಯಲ್ಲಿ ಪಾರ್ವತಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಇಂದು ಸಿಎಂ ಪತ್ನಿಯೊಂದಿಗೆ ಸಿಎಂ ಅವರ ಮೈಸೂರಿನ ಖಾಸಗಿ ಆಪ್ತ ಕಾರ್ಯದರ್ಶಿ ಕುಮಾರ್ ಜೊತೆಯಲ್ಲಿದ್ದರು.ಸಿಎಂ ಪತ್ನಿ ಪಾವರ್ತಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಪತಿ ಸಿದ್ದರಾಮಯ್ಯ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಪತ್ನಿಯೊಂದಿಗೆ ಕುಟುಂಬದ ಸದಸ್ಯರು ವಿಶೇಷ ಪೂಜೆಯಲ್ಲಿ ಭಾಗಿಯಾಗಿದರು.