ನಾಪತ್ತೆಯಾಗಿರುವ ಸಿದ್ದಾರ್ಥ್ ಕೊನೆಯ ಕಾಲ್ ಮಾಡಿದ್ದು ಯಾರಿಗೆ..?
ಕಾಫಿ ಡೇ ಮಾಲಿಕ ಸಿದ್ಧಾರ್ಥ್ ನಾಪತ್ತೆಯಾಗುವ ಮುನ್ನವೇ ಕೊನೆಯ ಕರೆಯೊಂದನ್ನು ಮಾಡಿದ್ದರು. ಹಾಗಾದ್ರೆ ಅವರು ಕರೆ ಮಾಡಿದ್ದು ಯಾರಿಗೆ।
ಬೆಂಗಳೂರು [ಜು.30] : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಳಿಯ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ನಾಪತ್ತೆಯಾಗಿದ್ದಾರೆ. ಸೋಮವಾರ ಸಂಜೆ ವೇಳೆಗೆ ಸಿದ್ಧಾರ್ಥ್ ಮಂಗಳೂರಿಗೆ ತೆರಳಿ ನೇತ್ರಾವತಿ ತಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ಇದೆ.
ಅವರೊಂದಿಗೆ ತೆರಳಿದ್ದ ಚಾಲಕ ಬಸವರಾಜ್ ಹೇಳುವ ಪ್ರಕಾರ ಫೋನ್ ಕರೆಯಲ್ಲಿದ್ದ ಸಿದ್ಧಾರ್ಥ್ ಮಳೆಯಲ್ಲಿಯೇ ಕಾರಿನಿಂದ ಇಳಿದು ತೆರಳಿದ್ದರು ಎಂದಿದ್ದಾರೆ.
ಎಸ್. ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ? ಪತ್ರದಲ್ಲಿ ಮಹತ್ವದ ಮಾಹಿತಿ!
ಆದರೆ ಅವರ ಕಾಲ್ ಲಿಸ್ಟ್ ಪ್ರಕಾರ ಕಾಫಿ ಡೇ CFO ರಾಮ್ ಮೋಹನ್ ಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರ ಸಿಡಿಆರ್ ಪ್ರಕಾರ ಕೊನೆಯ ಕಾಲ್ ಮಾಡಿ ಮಾತನಾಡಿದ್ದಾರೆಂದು ಮಾಹಿತಿ ಲಭ್ಯವಾಗಿದೆ.
"
ಇದು ತಮ್ಮ ಕೊನೆಯ ದಿನ ಎನ್ನುವಂತೆ ಮಾತನಾಡಿದ ಅವರು ಕಂಪನಿ ವ್ಯವಹಾರಗಳನ್ನು ಸೂಕ್ತ ರೀತಿಯಲ್ಲಿ ಮುಂದುವರಿಸಿಕೊಂಡು ಹೋಗಲು ಹಾಗೂ ಕಾಫಿ ಎಸ್ಟೇಟ್ ಕಡೆ ಗಮನ ಹರಿಸುವಂತೆಯೂ ಸೂಚನೆ ನೀಡಿರಬಹುದು ಎನ್ನಲಾಗಿದೆ.
ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಸಂಪೂರ್ಣ ತನಿಖೆಯ ಬಳಿಕವಷ್ಟೇ ಎಲ್ಲದಕ್ಕೂ ಸ್ಪಷ್ಟನೆ ದೊರಕಬೇಕಿದೆ.