ಕಾಫಿ ತೋಟದ ಮಾಲಿಕನಾದರೂ ಕೂಡ ಮುಂಬೈನಲ್ಲಿ ಇದ್ದಾಗ ಗುಜರಾತ್ ಮೂಲದ ಉದ್ಯಮಿಯೋರ್ವರ ಬಳಿ ಅತ್ಯಂತ ಆತ್ಮೀಯತೆ ಇಂದ ಇದ್ದ ಸಿದ್ಧಾರ್ಥ್ ಅವರ ಬಳಿಯೇ ಉದ್ಯಮ ಕ್ಷೇತ್ರದ ಎಲ್ಲಾ ವಿಚಾರ ತಿಳಿದಿದ್ದರು. 

ಬೆಂಗಳೂರು [ಜು.31]: ಗುಜರಾತ್‌ ಮೂಲದವರಾದ ಮಹೇಂದ್ರ ಕಂಪಾನಿ ಅವರಿಗೆ ಸಿದ್ಧಾರ್ಥ ಅತ್ಯಂತ ಆತ್ಮೀಯರಾಗಿಬಿಟ್ಟರು. ಅದಕ್ಕೆ ಕಾರಣವೂ ಇತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ಧಾರ್ಥ ಬೆಳಗ್ಗೆ 7ಕ್ಕೆಲ್ಲಾ ಕಚೇರಿಗೆ ಹಾಜರಾಗುತ್ತಿದ್ದರು. ಮಹೇಂದ್ರ ಕಂಪಾನಿ ಅವರು ಕಚೇರಿಯಿಂದ ಮನೆಗೆ ಹೋಗುವುದು ರಾತ್ರಿ 9 ಗಂಟೆಯಾಗುತ್ತಿತ್ತು. ಅಲ್ಲಿವರೆಗೂ ಅವರ ಜತೆಯೇ ಇರುತ್ತಿದ್ದರು. 

ಅವರ ಕಾರಿನವರೆಗೆ ಫೈಲ್‌ಗಳು ಹಾಗೂ ಊಟದ ಡಬ್ಬಿ ತಂದುಕೊಡುವ ಕೆಲಸವನ್ನೂ ಮಾಡಿದ್ದರು. ಚಿಕ್ಕಮಗಳೂರಿನ ಕಾಫಿ ತೋಟದ ಒಡೆಯ ಎಂಬ ಹಮ್ಮು-ಬಿಮ್ಮು ಬಿಟ್ಟು ಅವರು ಮಾಡಿದ ಕೆಲಸ ಕಂಪಾನಿ ಅವರ ವಿಶ್ವಾಸ ವಲಯಕ್ಕೆ ತಂದುಬಿಟ್ಟಿತು. 

ಷೇರುಪೇಟೆಯ ಪ್ರತಿಯೊಂದು ವ್ಯವಹಾರ, ಹೂಡಿಕೆ ಮಾಡುವಾಗ ವಹಿಸಬೇಕಾದ ಎಚ್ಚರ ಸೇರಿದಂತೆ ತಮಗೆ ಗೊತ್ತಿದ್ದ ಎಲ್ಲ ವಿಷಯಗಳನ್ನೂ ಕಂಪಾನಿ ಅವರು ಸಿದ್ಧಾರ್ಥ ಅವರಿಗೆ ಸೂಕ್ಷ್ಮವಾಗಿ ಅರ್ಥ ಮಾಡಿಸಿಕೊಟ್ಟರು. 2 ವರ್ಷ ಅಲ್ಲಿದ್ದು ಕಂಪಾನಿ ಅವರಿಗೆ ಹೇಳಿ ಸಿದ್ಧಾರ್ಥ ಬೆಂಗಳೂರಿಗೆ ಬಂದು ದೊಡ್ಡ ಉದ್ಯಮಿಯಾಗಿ ಬೆಳೆದರು.