ಕೊನೆಯುಸಿರೆಳೆದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್| ಸುಷ್ಮಾ ನಿಧನಕ್ಕೆ ವಕೀಲ ಹರೀಶ್ ಸಾಳ್ವೆ ಸಂತಾಪ| ಸುಷ್ಮಾ ಜೊತೆಗಿನ ಕೊನೆಯ ಸಂಭಾಷಣೆ ನೆನೆದು ಭಾವುಕರಾದ ಹರೀಶ್ ಸಾಳ್ವೆ| ಕೊನೆಯ ಕ್ಷಣದವರೆಗೆ ತಮ್ಮ ಜವಾಬ್ದಾರಿ ಮರೆತಿರಲಿಲ್ಲ ದಿಟ್ಟ ನಾಯಕಿ

ನವದೆಹಲಿ[ಆ.07]: ವಿದೇಶಾಂಗ ಸಚಿವರಾಗಿದ್ದ ಸುಷ್ಮಾ ಅವಧಿಯಲ್ಲಿ ಅತ್ಯಂತ ಹೆಚ್ಚು ಸದ್ದು ಮಾಡಿದ್ದು ಕುಲಭೂಷಣ್ ಜಾಧವ್ ಪ್ರಕರಣ. ಇದನ್ನು ಫಾರಿನ್ ಮಿನಿಸ್ಟರ್ ಆಗಿದ್ದ ಸುಷ್ಮಾ ನಿರ್ವಹಿಸಿದ್ದ ಶೈಲಿ ಹಾಗೂ ವಕೀಲ ಹರೀಶ್ ಸಾಳ್ವೆಯ ಕಾರ್ಯ ವೈಖರಿ ನಿಜಕ್ಕೂ ಶ್ಲಾಘನೀಯ. ಈ ಪ್ರಕರಣವನ್ನು ಭೇಷ್ ಎನ್ನುವಂತೆ ದಿಟ್ಟತನದಿಂದ ನಿಭಾಯಿಸಿದ್ದ ಸುಷ್ಮಾ, ಇದರೆಡೆ ತಮಗಿದ್ದ ಜವಾಬ್ದಾರಿಯನ್ನು ಕೊನೆಯ ಕ್ಷಣದವರೆಗೆ ಮರೆತಿರಲಿಲ್ಲ. ಇದಕ್ಕೆ ಸಾಕ್ಷಿ ಎಂಬಂತಿದೆ ಜಾಧವ್ ಪ್ರಕರಣದಲ್ಲಿ ಸಮರ್ಥವಾದ ವಾದ ಮಂಡನೆ ಮಾಡಿ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಗೆಲುವು ಪಡೆದಿದ್ದ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮಾತುಗಳು.

Add Asianetnews Kannada as a Preferred SourcegooglePreferred

ಕುಲಭೂಷಣ್ ತೀರ್ಪು: ಸಾಳ್ವೆ ಇಸ್ಕೊಂಡಿದ್ದು 1 ರೂ. ಖುರೇಷಿ ಕಸ್ಕೊಂಡಿದ್ದು 20 ಕೋಟಿ!

ಹೌದು ಸುಷ್ಮಾ ನಿಧನಕ್ಕೆ ಸಂತಾಪ ಸೂಚಿಸಿದ ವಕೀಲ ಹರೀಶ್ ಸಾಳ್ವೆ ಈ ಸಂದರ್ಭದಲ್ಲಿ, 'ಕೊನೆಯುಸಿರೆಳೆಯುವುದಕ್ಕೂ ಕೇವಲ ಒಂದು ಗಂಟೆ ಮೊದಲು ಕರೆ ಮಾಡಿದ್ದ ಸುಷ್ಮಾ ಅವರು ನನಗೆ ಬುಧವಾರ ಬರುವಂತೆ ಹೇಳಿದ್ದರು. ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಗೆಲುವು ಪಡೆದಿದ್ದೀರಿ. ನಿಮ್ಮನ್ನು ಭೇಟಿ ಮಾಡಬೇಕಿದೆ, ನಿಮಗೆ ನೀಡಬೇಕಿದ್ದ ಶುಲ್ಕ 1 ರೂ. ಬಾಕಿ ಇದೆ, ಆ. 07 ರಂದು ಸಂಜೆ 6 ಕ್ಕೆ ಬಂದು ನೀವದನ್ನು ಪಡೆದುಕೊಳ್ಳಿ ಎಂದಿದ್ದರು. ಆ ಅಮೂಲ್ಯ ಶುಲ್ಕವನ್ನು ಪಡೆಯಲು ಖಂಡಿತವಾಗಿಯೂ ಬರುತ್ತೇನೆ ಎಂದಿದ್ದೆ' ಎಂದು ಸುಷ್ಮಾ ಜೊತೆಗಿನ ತಮ್ಮ ಕೊನೆಯ ಸಂಭಾಷಣೆಯನ್ನು ನೆನೆದು ಭಾವುಕರಾಗಿದ್ದಾರೆ.

Scroll to load tweet…
Scroll to load tweet…

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಸರ್ಕಾರದ ಪರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸುವುದಕ್ಕೆ ಹರೀಶ್ ಸಾಳ್ವೆ ಕೇವಲ ಒಂದು ರೂಪಾಯಿ ಶುಲ್ಕ ಪಡೆಯಲು ನಿರ್ಧರಿಸಿದ್ದರು.

ಪಾಕ್ ನಂಟು, ತುರ್ತುಪರಿಸ್ಥಿತಿ ವೇಳೆ ವಿವಾಹ: ಸುಷ್ಮಾ ಬಗ್ಗೆ ಗೊತ್ತಿರದ ಸಂಗತಿಗಳು