ನೋಟು ಮುದ್ರಣದಲ್ಲಿನ ಕಾರ್ಯ ಚಟುವಟಿಕೆಗಳನ್ನು ಬಹಿರಂಗಪಡಿಸುವ ಮೂಲಕ ರಾಮದಾಸ್ ದೇಶದ ಕಾರ್ಯನೀತಿ ವಿರುದ್ಧ ವರ್ತಿಸಿದ್ದಾರೆ. ಆದ್ದರಿಂದ ರಾಮದಾಸ್ ಹೇಳಿಕೆ ಆಧರಿಸಿ ಅವರಿಗೆ ಮಾಹಿತಿ ಸೋರಿಕೆ ಮಾಡಿದ ಆರ್ಬಿಐ ಅಧಿಕಾರಿಗಳು, ನೌಕರರನ್ನು ಒಳಗೊಂಡಂತೆ ಎಲ್ಲರ ವಿರುದ್ಧ ಕ್ರಮ ಜರುಗಿಸಬೇಕೆಂದು ದೂರು ದಾಖಲಿಸಿದ್ದಾರೆ.
ಮೈಸೂರು (ನ.22): ದೇಶಾದ್ಯಂತ ನೋಟ್ ನಿಷೇಧವಾದ ಬಳಿಕ, ರಿಸರ್ವ್ ಬ್ಯಾಂಕಿನಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಮುದ್ರಣವಾಗುತ್ತಿದ್ದದ್ದು ನನಗೆ ಮೊದಲೇ ಗೊತ್ತಿತ್ತೆಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಎನ್.ಎಸ್.ಯು.ಐ. ಘಟಕ ಕಾರ್ಯಕರ್ತರು ರಾಮದಾಸ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ನೋಟು ಮುದ್ರಣದಲ್ಲಿನ ಕಾರ್ಯ ಚಟುವಟಿಕೆಗಳನ್ನು ಬಹಿರಂಗಪಡಿಸುವ ಮೂಲಕ ರಾಮದಾಸ್ ದೇಶದ ಕಾರ್ಯನೀತಿ ವಿರುದ್ಧ ವರ್ತಿಸಿದ್ದಾರೆ. ಆದ್ದರಿಂದ ರಾಮದಾಸ್ ಹೇಳಿಕೆ ಆಧರಿಸಿ ಅವರಿಗೆ ಮಾಹಿತಿ ಸೋರಿಕೆ ಮಾಡಿದ ಆರ್ಬಿಐ ಅಧಿಕಾರಿಗಳು, ನೌಕರರನ್ನು ಒಳಗೊಂಡಂತೆ ಎಲ್ಲರ ವಿರುದ್ಧ ಕ್ರಮ ಜರುಗಿಸಬೇಕೆಂದು ದೂರು ದಾಖಲಿಸಿದ್ದಾರೆ.
ಇನ್ನೊಂದೆಡೆ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರೂ ಸಹ ಶಾಸಕ ಎಂ.ಕೆ. ಸೋಮಶೇಖರ್ ವಿರುದ್ಧ ತಮ್ಮ ಬೆಂಬಲಿಗರ ಮೂಲಕ ದೂರು ನೀಡಿದ್ದಾರೆ. ಸೋಮಶೇಖರ್ ಅವರು ನೋಟ್ ನಿಷೇಧ ವಿಚಾರದಲ್ಲಿ ನಾನು ನೀಡಿದ ಹೇಳಿಕೆಯನ್ನು ತಿರುಚಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಆರೋಪಿಸಿದ್ದಾರೆ.
