ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲಾಗಿದೆ. ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲು ಮಾಡಲಾಗಿದೆ. 

ಬೆಂಗಳೂರು: ಬುದ್ಧಿಜೀವಿಗಳ ಕುರಿತು ಅವಹೇಳನಕಾರಿ ಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಶುಕ್ರವಾರ ದೂರು ದಾಖಲಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ದೂರು ಸ್ವೀಕರಿಸಿದ ಪೊಲೀಸರು, ಕೃತ್ಯವು ವಿಜಯಪುರ ಪೊಲೀಸರ ವ್ಯಾಪ್ತಿಯಲ್ಲಿ ನಡೆದಿದ್ದು, ಈ ದೂರನ್ನು ಅಲ್ಲಿನ ಪೊಲೀಸರಿಗೆ ಮುಂದಿನ ತನಿಖೆ ವರ್ಗಾಯಿಸಲಾಗುತ್ತದೆ ಎಂದು ಹೇಳಿದ್ದಾರೆ. 

‘ನಾನು ಗೃಹ ಸಚಿವನಾಗಿದ್ದರೆ ಬುದ್ಧಿಜೀವಿಗಳನ್ನು ಗುಂಡಿಕ್ಕಿ ಕೊಲ್ಲಿಸುತ್ತಿದ್ದೆ’ ಎಂಬ ವಿವಾದಾತ್ಮಕ ಹೇಳಿಕೆಯನ್ನು ಗುರುವಾರ ವಿಜಯ ಪುರದಲ್ಲಿ ಗುರುವಾರ ಯತ್ನಾಳ್ ಅವರು ನೀಡಿದ್ದರು ಎನ್ನಲಾಗಿದೆ. ಈ ಹೇಳಿಕೆ ಖಂಡಿಸಿರುವ ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಅವರು, ಈ ರೀತಿ ಕೀಳು ಮಟ್ಟದ ಹೇಳಿಕೆ ನೀಡಿರುವ ಶಾಸಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.