Asianet Suvarna News Asianet Suvarna News

ಪ್ರಚೋದನಾಕಾರಿ ಹೇಳಿಕೆ: ಬಿಎಸ್’ವೈ ವಿರುದ್ಧ ದೂರು

ಕರಾವಳಿಯಲ್ಲಿ ನಡೆಯುತ್ತಿದ್ದ ಕೋಮು ಉದ್ವಿಗ್ನತೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ  ಹನುಮೆಗೌಡ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

Complaint Against BSY over Provocative Statement

 

ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿದ್ದ ಕೋಮು ಉದ್ವಿಗ್ನತೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ  ಹನುಮೆಗೌಡ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಕಾಮಾಕ್ಷಿಪಾಳ್ಯದ ಹನುಮೆಗೌಡ ಎಂಬವರು ಶನಿವಾರ ದೂರು ನೀಡಿದ್ದು,  ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಪೊಲೀಸರು ಬಂಧಿಸಿದರೆ ರಾಜ್ಯವೇ ಬೆಂಕಿ ಹೊತ್ತಿ ಉರಿಯುತ್ತದೆ ಎಂದು ಯಡಿಯೂರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಗಂಭೀರವಾಗಿ ಪರಿಗಣಿಸಿ ಕಾನೂ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

Follow Us:
Download App:
  • android
  • ios