Asianet Suvarna News Asianet Suvarna News

ಅಯೋಧ್ಯೆ ವಿವಾದ ಇತ್ಯರ್ಥ: ಚಂದ್ರಶೇಖರ್ ಪ್ರಯತ್ನಕ್ಕೆ ರಾಜೀವ್ ಅಡ್ಡಿ!

ಅಯೋಧ್ಯೆ ವಿವಾದ ಇತ್ಯರ್ಥದ ಚಂದ್ರಶೇಖರ್‌ ಯತ್ನಕ್ಕೆ ರಾಜೀವ್‌ ಅಡ್ಡಿ| ಸುಗ್ರೀವಾಜ್ಞೆ ಮೂಲಕ ವಿವಾದ ಇತ್ಯರ್ಥಕ್ಕೆ ನಿರ್ಧರಿಸಿದ್ದ ಮಾಜಿ ಪ್ರಧಾನಿ| ವಿವಾದ ಇತ್ಯರ್ಥ ಶ್ರೇಯ ಚಂದ್ರಶೇಖರ್‌ಗೆ ಸಲ್ಲುವ ಬಗ್ಗೆ ರಾಜೀವ್‌ಗೆ ಆತಂಕ| ರಾಜ್ಯಸಭಾ ಉಪ ಸಭಾಪತಿ ಹರಿವಂಶ ಬರೆದ ಪುಸ್ತಕದಲ್ಲಿ ಉಲ್ಲೇಖ

Cong backed Chandra Shekhar govt was planning ordinance to resolve Ayodhya dispute Book
Author
Bangalore, First Published Jul 15, 2019, 10:43 AM IST

ನವದೆಹಲಿ[ಜು.15]: ಬಾಬ್ರಿ ಮಸೀದಿ ಧ್ವಂಸಕ್ಕಿಂತ 2 ವರ್ಷ ಮುನ್ನ ಅಂದರೆ 1990ರಲ್ಲಿ ಕಾಂಗ್ರೆಸ್‌ ಬೆಂಬಲಿತ ಚಂದ್ರಶೇಖರ್‌ ನೇತೃತ್ವದ ಸರ್ಕಾರ ಸುಗ್ರೀವಾಜ್ಞೆ ತರುವ ಮೂಲಕ ಅಯೋಧ್ಯೆ ವಿವಾದ ಬಗೆಹರಿಸಲು ಉದ್ದೇಶಿಸಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಅದು ವಿಫಲವಾಗಿತ್ತು ಎಂಬ ಸಂಗತಿಯನ್ನು ರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ಅವರು ಚಂದ್ರಶೇಖರ್‌ ಅವರ ಬಗ್ಗೆ ಬರೆದ ಪುಸ್ತಕವೊಂದು ಬಹಿರಂಗಪಡಿಸಿದೆ. ‘ಚಂದ್ರಶೇಖರ್‌- ‘ದ ಲಾಸ್ಟ್‌ ಐಕಾನ್‌ ಆಫ್‌ ಐಡಿಯೊಲಾಜಿಕಲ್‌ ಪೊಲಿಟಿಕ್ಸ್‌’ ಎಂಬ ಪುಸ್ತಕದಲ್ಲಿ ಈ ಸಂಗತಿ ವಿವರಿಸಲಾಗಿದೆ.

ಚಂದ್ರಶೇಖರ್‌ ಅವರು ಅಂದು ಮುಖ್ಯಮಂತ್ರಿಗಳಾಗಿದ್ದ ಶರದ್‌ ಪವಾರ್‌, ಮುಲಾಯಂ ಸಿಂಗ್‌ ಯಾದವ್‌ ಮತ್ತು ಭೈರೋನ್‌ ಸಿಂಗ್‌ ಶೇಖಾವತ್‌ ಅವರೊಂದಿಗೆ ವಿಶ್ವ ಹಿಂದು ಪರಿಷತ್‌ ಹಾಗೂ ಮುಸ್ಲಿಂ ಮುಖಂಡರ ಜೊತೆ ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ಸಂಧಾನ ನಡೆಸಿದ್ದರು. ಅಯೋಧ್ಯೆಲ್ಲಿನ ವಿವಾದಿತ ಸ್ಥಳವನ್ನು ಸ್ಮಾರಕವಾಗಿ ಉಳಿಸಿಕೊಳ್ಳುವುದು ಮತ್ತು ಸಮೀಪದ ಜಾಗದಲ್ಲಿ ರಾಮಮಂದಿರ ಹಾಗೂ ಮಸೀದಿ ನಿರ್ಮಿಸುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಲು ವಿಎಚ್‌ಪಿ ಹಾಗೂ ಮುಸ್ಲಿಂ ಮುಖಂಡರ ಮಧ್ಯೆ ಸಹಮತವೂ ವ್ಯಕ್ತವಾಗಿತ್ತು.

ಆದರೆ, ದೀರ್ಘಕಾದಿಂದ ಕಗ್ಗಂಟಾಗಿರುವ ಅಯೋಧ್ಯೆ ವಿವಾದವನ್ನು ಬಗೆಹರಿಸಿದ ಶೇಯಸ್ಸನ್ನು ಚಂದ್ರ ಶೇಖರ್‌ ಪಡೆದುಕೊಳ್ಳುವುದು ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ರಾಜೀವ್‌ ಗಾಂಧಿ ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಹೊರಡಿಸುವುದು ಪ್ರಧಾನಿ ಚಂದ್ರಶೇಖರ್‌ಗೆ ಸಾಧ್ಯವಾಗಲಿಲ್ಲ ಎಂದು ಪುಸ್ತಕದಲ್ಲಿ ವಿವರಿಸಲಾಗಿದೆ.

Follow Us:
Download App:
  • android
  • ios