ರಾಜ್ಯದಲ್ಲಿ ರಾಜೀನಾಮೆ ಪರ್ವ ಜೋರಾಗಿದೆ. 13 ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಇದರ ನಡುವೆ ಮಹತ್ವದ ಬೆಳವಣಿಗೆಯಲ್ಲಿ  ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಈ ರಾಜಕೀಯ ಬೆಳವಣಿಗೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. 

ಬೆಂಗಳೂರು [ಜು.08] : ರಾಜ್ಯ ರಾಜಕೀಯದಲ್ಲಿ ಸುನಾಮಿಯಂತೆ ರಾಜೀನಾಮೆ ಪರ್ವ ಎದ್ದಿದೆ. 13 ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಎಲ್ಲಾ ಸಚಿವರು ಕೂಡ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಈ ರಾಜಕೀಯ ಪ್ರಹಸನಕ್ಕೆ ರಾಜ್ಯದ ಜನತೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Add Asianetnews Kannada as a Preferred SourcegooglePreferred

ರಾಜೀನಾಮೆ ನೀಡಿದ ಶಾಸಕರ ವಿರುದ್ಧ ಇದೀಗ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದಾರೆ.

 ಮತ ನೀಡಿದ ಮತದಾರರಿಗೆ ಬೆಲೆ ನೀಡದವರು ಎಂದು ರಾಜೀನಾಮೆ ನೀಡದ ಶಾಸಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಪೋಸ್ಟ್ ಗಳನ್ನು ಹಾಕಲಾಗುತ್ತಿದೆ. ಈ ಮೂಲಕ ಶಾಸಕರ ನಡೆ ವಿರುದ್ಧ ಜನತೆ ಆಕ್ರೋಶ ಹೊರಹಾಕುತ್ತಿದ್ದಾರೆ. 

ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಮಹೇಶ್ ಕುಮಟಳ್ಳಿ, ಎಚ್. ವಿಶ್ವನಾಥ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಹಲವರ ಶ್ರದ್ಧಾಂಜಲಿ ಪೋಸ್ಟ್ ಗಳನ್ನು ಫೇಸ್ ಬುಕ್ ಗಳಲ್ಲಿ ಹಾಕಲಾಗಿದೆ.