Asianet Suvarna News Asianet Suvarna News

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದೂರು ದಾಖಲು..!

ಚಿಂಚೋಳಿ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Congress Complaints to EC Against BSY for Instigating Caste Factor In By Election Campaign
Author
Bengaluru, First Published May 15, 2019, 10:14 PM IST

ಬೆಂಗಳೂರು, [ಮೇ.15]: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯ ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

ಮಾಜಿ ಮುಖ್ಯಮಂತ್ರಿ ‘ವೀರೇಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ’ ಎಂಬ ಬಿ.ಎಸ್‌ ಯಡಿಯೂರಪ್ಪ ಹೇಳಿಕೆ ಲಿಂಗಾಯತ ಸಮುದಾಯವನ್ನ ಪ್ರಚೋದಿಸುವಂತಿದೆ ಎಂದು ಆರೋಪಿಸಿ ಕಾಂಗ್ರೆಸ್​ ದೂರು ನೀಡಿದೆ. 

ಕೆಪಿಸಿಸಿ ಕಾರ್ಯದರ್ಶಿ ಎ.ಎನ್.ನಟರಾಜ್​ಗೌಡ, ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅದ್ದೆ, ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರರಾವ್, ಇಂದು [ಬುಧವಾರ] ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. 

ಸಮುದಾಯವನ್ನ ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ. ಬಿಎಸ್‌ವೈ ಜಾತಿಯಾಧಾರಿತ ಪ್ರವೋಕ್ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿ ನಿಲುವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನ ಉಲ್ಲಂಘಿಸಿದಂತಾಗಿದೆ. ಹೀಗಾಗಿ ಬಿಎಸ್ ವೈ ವಿರುದ್ಧ ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ. 

 

Follow Us:
Download App:
  • android
  • ios