Asianet Suvarna News Asianet Suvarna News

ಸಿದ್ದರಾಮಯ್ಯ ಬಗ್ಗೆ ಎಲ್ಲಾ ಹೇಳ್ತೇನೆ ಎಂದು ಬಾಂಬ್ ಸಿಡಿಸಿದ MTB ನಾಗರಾಜ್

ಕಾಂಗ್ರೆಸ್ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್ ರಾಜ್ಯದ ಶ್ರೀಮಂತ ರಾಜಕಾರಣಿ. ಇವರು ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರ ಕ್ಯಾಂಪ್ ನಲ್ಲಿ ಒಬ್ಬರಾಗಿದ್ದರು. ಆದ್ರೆ ಇದೀಗ ಸಿದ್ದು ವಿರುದ್ಧವೇ ತಿರುಗಿ ಬಿದ್ದ ನಾಗರಾಜ್  ಬುಸ್ ಬುಸ್....  

Congress Disqualified MLA  MTB Nagaraj lashes out at  siddaramaiah
Author
Bengaluru, First Published Aug 29, 2019, 5:52 PM IST

ಕೋಲಾರ,[ಆ.29]:  ಜೆಡಿಎಸ್ ನಲ್ಲಿ ಅಧಿಕಾರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದವರು. ಕಾಂಗ್ರೆಸ್ ಪಕ್ಷವನ್ನು ಸಿದ್ದರಾಮಯ್ಯ ಕಟ್ಟಿಲ್ಲ. ಕಾಂಗ್ರೆಸ್ ಕಟ್ಟಿದ್ದು ನಾವು ಎಂದು ಸಿದ್ದರಾಮಯ್ಯ ವಿರುದ್ಧವೇ  ವಾಗ್ದಾಳಿ ನಡೆಸಿದರು.

ಕೋಲಾದರಲ್ಲಿ ಇಂದು [ಗುರುವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಟಿ.ಬಿ, ಆಡಳಿತ ಅಧಿಕಾರ ವೈಪಲ್ಯಗಳಿಂದ ಬೇಸತ್ತು ಹೊರಗೆ ಬಂದಿದ್ದೇವೆ.  ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿ ಏನು ಮಾಡಲಾಗುತ್ತಿಲ್ಲ.  ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಬಂದು ನನ್ನ ಕ್ಷೇತ್ರದಲ್ಲಿ ತಟ್ಟಲಿ ತೊಡೆ. ಇಂತಹ ತೊಡೆ ತಟ್ಟುವರನ್ನ ನಾನು ನೋಡಿದ್ದೇನೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಹೇಳುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದರು.

ನಮ್ಮ ಮನೆಗೆ ಬಂದು ವಾಸ ಮಾಡಿ ಸಂಸಾರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಎಂಟಿಬಿ, ಮೈತ್ರಿ ಸರ್ಕಾರ ಬೀಳಲು ದೇವೇಗೌಡ ಮತ್ತು ಸಿದ್ದರಾಮಯ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದರು.

ಕುಮಾರಸ್ವಾಮಿ, ರೇವಣ್ಣ ನನ್ನ ವಸತಿ ಖಾತೆಯಲ್ಲಿ ಮೂಗು ತೂರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಜಿನಾಮೆ ನೀಡುತ್ತೇನೆ ಎಂದು ಮೂರು ಬಾರಿ ಸಿದ್ದರಾಮಯ್ಯಗೆ ಹೇಳಿದ್ದೆ. ಕೊನೆಯದಾಗಿ ಎರಡು ಉದ್ದೇಶಗಳಿವೆ ಒಂದು ರಾಜಕೀಯ ನಿವೃತ್ತಿ,. ಇನ್ನೊಂದು ನನಗೆ ಯಾರ ಹಂಗೂ ಬೇಡ ಕಾರ್ಯಕರ್ತರ ಅಭಿಪ್ರಾಯದಿಂದ ಸ್ವತಂತ್ರವಾಗಿ ಸ್ಪರ್ದೆ ಮಾಡಲು ನಿರ್ಧರಿಸುತ್ತೇನೆ ಎಂದರು.

Follow Us:
Download App:
  • android
  • ios