Asianet Suvarna News Asianet Suvarna News

ಕಾಂಗ್ರೆಸಿಗೆ ಫುಲ್ ಶಾಕ್: ಖರ್ಗೆ ಆಪ್ತ, ಮಾಜಿ ಸಚಿವ ನಾಳೆ ಬಿಜೆಪಿಗೆ ಸೇರ್ಪಡೆ

ಬಿಜೆಪಿಯವರು ರಾಮಾನಾಥ ಕೋವಿಂದ ಅವರನ್ನು ರಾಷ್ಟ್ರಪತಿ, ಸಾತ್ವಿ ನಿರಂಜನ್ ಅವರನ್ನು ಕೇಂದ್ರದ ಸಚಿವೆಯನ್ನಾಗಿ ಮಾಡಿದ್ದಾರೆ. ಇದಕ್ಕಾಗಿ  ಕರ್ನಾಟಕದ ಕೋಲಿ ಸಮಾಜದ ವತಿಯಿಂದ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 

Congress Ex Minister Baburao chinchansur set to join BJP
Author
Bengaluru, First Published Aug 28, 2018, 9:32 PM IST

ಯಾದಗಿರಿ[ಆ.28]: ಕಾಂಗ್ರೆಸಿನ ಹಿರಿಯ ನಾಯಕ  ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಪರಮಾಪ್ತ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್  ಅವರು ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಸುವರ್ಣ ನ್ಯೂಸ್ .ಕಾಂ ಸೋದರ ಸಂಸ್ಥೆ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಅವರು,ಸ್ವಾತಂತ್ರ್ಯ ಸಿಕ್ಕಿ 72 ವರ್ಷ ಆದರೂ ನಮ್ಮ ಸಮಾಜಗಳಾದ ಕೋಲಿ, ಕಬ್ಬಲಿಗ, ಅಂಬಿಗ ಸಮಾಜದವರನ್ನು ಕಾಂಗ್ರೆಸ್ ಗುರುತಿಸಿಲ್ಲ. ಭಾರತೀಯ ಜನತಾ ಪಕ್ಷ ಗುರುತಿಸಿದ್ದು ಇದಕ್ಕಾಗಿ ಬಿಜೆಪಿ ಸರ್ಕಾರಕ್ಕೆ ಅಭಿನಂನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಬಿಜೆಪಿಯವರು ರಾಮಾನಾಥ ಕೋವಿಂದ ಅವರನ್ನು ರಾಷ್ಟ್ರಪತಿ, ಸಾತ್ವಿ ನಿರಂಜನ್ ಅವರನ್ನು ಕೇಂದ್ರ ಸಚಿವೆಯನ್ನಾಗಿ ಮಾಡಿದ್ದಾರೆ. ಇದಕ್ಕಾಗಿ  ಕರ್ನಾಟಕದ ಕೋಲಿ ಸಮಾಜದ ವತಿಯಿಂದ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಯಾವುದೇ ಆಸೆ ಇಟ್ಟಿಕೊಂಡು ಬಿಜೆಪಿ ಸೇರುತ್ತಿಲ್ಲ. ನನಗೆ ಎರಡೇ ಆಸೆ ಇರುವುದು. ಒಂದು ಗುರುಮಿಠಕಲ್ ಜನರ ಸೇವೆ ಮಾಡುವುದು ಹಾಗೂ ನಮ್ಮ ಸಮುದಾಯವನ್ನು  ಪ.ಪಂಗಡಕ್ಕೆ ಸೇರಿಸುವುದು ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದರು.

ನಾನು ಎರಡು ಸಲ ಕಾಂಗ್ರೆಸ್ ಮಂತ್ರಿಯಾಗಿದ್ದೆ.  ಎಐಸಿಸಿ ಸದಸ್ಯನಾಗಿದ್ದೆ. ಕೆಪಿಸಿಸಿ ಕಾರ್ಯದರ್ಶಿ ಯಾಗಿ ಕೆಲಸ ಮಾಡಿದ್ದೇನೆ. ನನ್ನ ವರ್ಚಸ್ಸು ನೋಡಿ ನನಗಾಗದವರು ಕಳೆದ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದ್ದಾರೆ.ಇದಕ್ಕೆ ನೇರವಾಗಿ ಕಾಂಗ್ರೆಸಿನವರೆ ಕಾರಣ. ಇವೆಲ್ಲ ಕಾರಣದಿಂದ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ತಿಳಿಸಿದರು.

 

Follow Us:
Download App:
  • android
  • ios