ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿಗೆ ನಿರ್ಧರಿಸಿವೆ. ಇದರಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಪಕ್ಷದ ಸಂಸದರು ನಿರ್ಧಾರ ಮಾಡಿದ್ದಾರೆ.

ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿಗೆ ನಿರ್ಧರಿಸಿವೆ. ಇದರಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಪಕ್ಷದ ಸಂಸದರು ನಿರ್ಧಾರ ಮಾಡಿದ್ದಾರೆ. ಜೆಡಿಎಸ್ ಪಕ್ಷವು ಶಿವಮೊಗ್ಗ ಸೇರಿದಂತೆ ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದೆ.

Add Asianetnews Kannada as a Preferred SourcegooglePreferred

ಹೀಗಾಗಿ, ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಬಳಿಕ ಯಾವ ಪಕ್ಷಕ್ಕೆ ಕ್ಷೇತ್ರ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಅವರಿಗೆ ಬಿಟ್ಟುಕೊಡು ವುದಕ್ಕೂ ಮೊದಲು ಹಲವು ಹಂತಗಳಲ್ಲಿ ಚರ್ಚೆಗಳು ನಡೆಯಬೇಕು ಎಂದು ಸಂಸದರು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕ್ಷೇತ್ರಗಳ ಹಂಚಿಕೆ ಏಕಾಏಕಿ ನಡೆ ಯುವುದಿಲ್ಲ. ಕ್ಷೇತ್ರಗಳ ಹಂಚಿಕೆಗೆ ಮೊದಲು ಎಲ್ಲಾ ಹಂತದಲ್ಲೂ ಸಭೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು ಎನ್ನಲಾಗಿದೆ.