‘ಕೊನೆ ಕ್ಷಣದಲ್ಲಿ ರಿವರ್ಸ್ ಆಪರೇಷನ್, ದೋಸ್ತಿಗೆ ಬಿಜೆಪಿಯ 4 MLA ಸಪೋರ್ಟ್’
ಕರ್ನಾಟಕ ರಾಜಕಾರಣದಲ್ಲಿ ಗುರುವಾರ ಅಂದರೆ ಜುಲೈ 17 ಮಹತ್ವದ ದಿನವಾಗಲಿದ್ದು ಸದ್ಯ ಅಧಿಕಾರದಲ್ಲಿರುವ ದೋಸ್ತಿ ಸರಕಾರದ ಭವಿಷ್ಯ ನಿರ್ಧಾರ ಆಗಲಿದೆ. ಇದೆಲ್ಲದರ ನಡುವೆ ಕಾಂಗ್ರೆಸ್ ನಾಯಕರೊಬ್ಬರು ನೀಡಿರುವ ಹೇಳಿಕೆ ಹೊಸ ಬೆಳವಣಿಗೆಗೆ ಕಾರಣವಾಗಿದೆ.
ಬಾಗಲಕೋಟೆ[ಜು. 17] ನಾಳೆ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಕುಮಾರಸ್ವಾಮಿ ರಿವರ್ಸ್ ಆಪರೇಷನ್ ಮಾಡಿದ್ರಾ? ಎಬ್ಬುವ ಪ್ರಶ್ನೆ ಮೂಡುತ್ತಿದೆ.
ಬಾಗಲಕೋಟೆಯಲ್ಲಿ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ನಾಳೆ ಬಿಜೆಪಿಯವರು ನಾಲ್ಕೈದು ಜನ ಬಂದು ನಮಗೆ ಬೆಂಬಲಿಸಬಹುದು ಎಂದು ಹೇಳಿಕೆ ನೀಡಿದ್ದು ರಾಜಕೀಯವಾಗಿ ಕುತೂಹಲ ಮೂಡಿಸಿದೆ.
ವಿಶ್ವಾಸ ಮತ ಗೆದ್ದೆ ಗೆಲ್ತೇವೆ.. ಸಿಎಂ ಸೂತ್ರ
ಸಿಎಂ ಕುಮಾರಸ್ವಾಮಿ ಅಲ್ಲಿಯೂ ಆಪರೇಷನ್ ಮಾಡಿದ್ದೀವಿ ಅಂತಿದ್ದಾರೆ. ನಾಳೆ ಬಿಜೆಪಿಯವರೇ ಬಂದು ನಮ್ಮ ಪರ ಕೈ ಎತ್ತಿ ಓಟ್ ಹಾಕಬಹುದು. ಸಿಎಂ ಮಾತು ಉಲ್ಲೇಖಿಸಿ ವಿಶ್ವಾಸ ಮತ ಯಾಚನೆ ವೇಳೆ ಬಿಜೆಪಿಯವರಿಂದಲೂ ಬೆಂಬಲ ಸಿಗಬಹುದೆಂದ ರಾಯರೆಡ್ಡಿ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಅವರೇ ಹೇಳ್ತಿದ್ದಾರೆ.
ಈ ಕುರಿತು ಸಿಎಂ ಕುಮಾರಸ್ವಾಮಿ ಸಹ ಪ್ರಯತ್ನ ಮಾಡಿರಬಹುದು. ನಾಳೆ ವಿಶ್ವಾಸ ಮತ ಯಾಚನೆ ವೇಳೆ ಏನು ಬೇಕಾದ್ರೂ ಆಗಬಹುದು. ಬಿಜೆಪಿ ಬೆಂಬಲ ಸಿಗಬಹುದು ಇಲ್ಲವೆ ನಮ್ಮವರೇ ಬಂದು ಬೆಂಬಲವನ್ನೂ ನೀಡಬಹುದು. ವಿಶ್ವಾಸ ಮತಯಾಚನೆ ವೇಳೆ ಏನಾಗಲಿದೆ ಅನ್ನೋದನ್ನ ಕಾದು ನೋಡಿ ಎಂದು ವಿಶ್ವಾಸದಲ್ಲೇ ಮಾತನಾಡಿದ ರಾಯರೆಡ್ಡಿ ಅಚ್ಚರಿ ಮೂಡಿಸಿದರು.