ಕುರ್ಚಿಗಾಗಿ ಮಿರ್ಚಿ ಬಿಟ್ಟುಕೊಂಡ ಕೈ ನಾಯಕರು: ಬಡಿದಾಟ ಕಂಡವರೆಲ್ಲ ನಕ್ಕರು!
ಕುರ್ಚಿಗಾಗಿ ಎಲ್ಲರೆದುರೇ ಬಡಿದಾಡಿಕೊಂಡ ಕಾಂಗ್ರೆಸ್ ನಾಯಕರು| ಪ್ರತಿಭಾಟನಾ ಸಮಾವೇಶದಲ್ಲಿ ಕೈ ನಾಯಕರ ಜಟಾಪಟಿ| ಕಾಂಗ್ರೆಸ್ ನಾಯಕರಾದ ವಿ. ಹನುಂತ್ ರಾವ್, ನಾಗೇಶ್ ಮುದ್ದಿರಾಜು ನಡುವೆ ಬಡಿದಾಟ| ಹನುಮಂತ್ ರಾವ್ ಕುಳಿತಿದ್ದ ಕುರ್ಚಿ ಮತ್ತೊಬ್ಬರೊಇಗೆ ಕೊಟ್ಟಿದ್ದಕ್ಕೆ ಜಗಳ ಪ್ರಾರಂಭ | ಒಬ್ಬರನ್ನೊಬ್ಬರು ತಳ್ಳಿ ನಗೆಪಾಟಲಿಗೀಡಾದ ನಾಯಕರು|
ಹೈದರಾಬಾದ್(ಮೇ.11): ಕುರ್ಚಿಗಾಗಿ ರಾಜಕೀಯ ನಾಯಕರು ಬಡಿದಾಡಿಕೊಳ್ಳುವುದು ಭಾರತದಲ್ಲಿ ಸಾಮಾನ್ಯ ಸಂಗತಿ ಏನಲ್ಲ ಬಿಡಿ. ಅದರಂತೆ ಟಿಆರ್ಎಸ್ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಕುರ್ಚಿಗಾಗಿ ಎಲ್ಲರ ಸಮ್ಮುಖದಲ್ಲೇ ಬಡಿದಾಡಿಕೊಂಡ ಘಟನೆ ಹೈದಾರಾಬಾದ್ನಲ್ಲಿ ನಡೆದಿದೆ.
ತೆಲಂಗಾಣದ ಹಿರಿಯ ಕಾಂಗ್ರೆಸ್ ನಾಯಕ ವಿ. ಹನುಮಂತ್ ರಾವ್ ಮತ್ತು ನಾಗೇಶ್ ಮುದ್ದಿರಾಜು ಕುರ್ಚಿಗಾಗಿ ಬಡಿದಾಡಿಕೊಂಡಿದ್ದು, ನಾಯಕರ ಜಗಳ ಕಂಡು ನೆರೆದ ಜನಸ್ತೋಮ ನಕ್ಕು ನಕ್ಕು ಸುಸ್ತಾಗಿದ್ದಾರೆ.
#WATCH Telangana: A scuffle broke out between Congress leaders V Hanumantha Rao and Nagesh Mudiraj during the protest by opposition parties today in Hyderabad against state govt over the issue of state board intermediate results. pic.twitter.com/lyUsD8ZDKU
— ANI (@ANI) May 11, 2019
ತೆಲಂಗಾಣದ 10ನೇ ತರಗತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಪಕ್ಷಗಳು ಟಿಆರ್ಎಸ್ ಸರ್ಕಾರದ ವಿರುದ್ಧ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಈ ವೇಳೆ ಮಾತನಾಡಲು ಎದ್ದು ನಿಂತ ವಿ ಹನುಮಂತ್ ರಾವ್ ಅವರ ಕುರ್ಚಿಯನ್ನು ನಾಗೇಶ್ ಮುದ್ದಿರಾಜು ಆ ವೇಳೆ ಬಂದ ಮತ್ತೋರ್ವ ನಾಯಕರಿಗೆ ಕೊಟ್ಟಿದ್ದಾರೆ.
ಇದರಿಂದ ಕೋಪಗೊಂಡ ಹನುಮಂತ್ ರಾವ್, ಕೂಡಲೇ ನಾಗೇಶ್ ಅವರನ್ನು ತಳ್ಳಿ ಹೊಡೆಯಲು ಮುಂದಾಗಿದ್ದಾರೆ. ಇದರಿಂದ ಮುಜುಗರಕ್ಕೀಡಾದ ನಾಗೇಶ್ ಕೂಡ ಹನುಮಂತ್ ರಾವ್ ಮೇಲೆ ಕೈ ಮಾಡಿದ್ದಾರೆ. ಇಬ್ಬರೂ ನಾಯಕರ ಜಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಾಂಗ್ರೆಸ್ ತೀವ್ರ ಮುಜುಗರಕ್ಕೀಡಾಗಿದೆ.