ಕಾಂಗ್ರೆಸಿಗರು ವಿಷ ಉಣಿಸುತ್ತಿದ್ದಾರೆ ಎಂದು ಹೇಳಿದ ಪ್ರತಾಪ್ ಸಿಂಹ ಹೇಳಿಕೆ ಬಿಜೆಪಿ ಹಾಗೂ ಕಾಂಗ್ರೆಸಿಗರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. 

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇತ್ತೀಚೆಗೆ ಸಮಾರಂಭವೊಂದರಲ್ಲಿ ಕಣ್ಣೀರು ಹಾಕಿ ‘ತಾವು ವಿಷಕಂಠ’ ಎಂದು ಹೇಳಿದ ವಿಷಯ ಲೋಕಸಭೆಯಲ್ಲಿ ಬುಧವಾರ ಪ್ರಸ್ತಾಪವಾಗಿ ಕರ್ನಾಟಕದ ಬಿಜೆಪಿ ಸಂಸದರು ಹಾಗೂ ಕಾಂಗ್ರೆಸ್ ಸಂಸದರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. 

Add Asianetnews Kannada as a Preferred SourcegooglePreferred

ಬರಗಾಲ ಕುರಿತ ಚರ್ಚೆಯಲ್ಲಿ ಮಾತನಾಡಿದ ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ, ‘ಕರ್ನಾಟಕ ಮುಖ್ಯಮಂತ್ರಿಗಳು ತಾವು ವಿಷ ಕುಡಿಯುತ್ತಿದ್ದೇವೆ ಎಂದು ಹೇಳಿದ್ದಾರೆ. ಅಧಿಕಾರದಲ್ಲಿ ಉಳಿಯಲು ತಾವು ಹೀಗೆ ಮಾಡುತ್ತಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಹೆಚ್ಚಿನ ಅಧಿಕಾರಕ್ಕೆ ಹಾಗೂ ಸರ್ಕಾರದ ಮೇಲೆ ನಿಯಂತ್ರಣ ಸಾಧಿಸುವುದಕ್ಕೆ ವಿಷ ಉಣಿಸುತ್ತಿದೆ’ ಎಂದರು.

ಪ್ರತಾಪ್ ಈ ಹೇಳಿಕೆ ನೀಡುತ್ತಿದ್ದಂತೆಯೇ ಕರ್ನಾಟಕದ ಕಾಂಗ್ರೆಸ್ ಸಂಸದರು ಹಾಗೂ ಇತರರು ಎದ್ದು ನಿಂತು ಪ್ರತಿಭಟನೆ ವ್ಯಕ್ತಪಡಿಸಿದರು. ಆಗ ಮಧ್ಯಪ್ರವೇಶಿಸಿದ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ‘ಪ್ರತಾಪ್ ಅವರು ಯುವ ಸಂಸದರು. ಅವರು ಲೋಕಸಭೆಯಲ್ಲಿ ಮಾತನಾಡುವುದು ಅಪರೂಪ. ಮಾತಾಡಲು ಬಿಡಿ’ ಎಂದರು.