ಒಂದು ಕಡೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದರೆ ಇತ್ತ ರಾಜ್ಯದಲ್ಲಿಯೂ ಗೊತ್ತಿಲ್ಲದ ಬೆಳವಣಿಗೆ ನಡೆಯುತ್ತಿದೆ.

ಬಾಗಲಕೋಟೆ[ಜ.07] ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕ, ಶಾಸಕ ಮುರುಗೇಶ್ ನಿರಾಣಿ ಮನೆಯಲ್ಲಿ ಊಟ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಈ ವಿಚಾರ ಅಸಮಾಧಾನ ಹುಟ್ಟುಹಾಕಿದೆ.

Add Asianetnews Kannada as a Preferred SourcegooglePreferred

ಬೀಳಗಿ ಪಟ್ಟಣದ ಮಾಜಿ ಸಚಿವ ಮುರುಗೇಶ ನಿರಾಣಿ ಮನೆಯಲ್ಲಿ ಕಾಂಗ್ರೆಸ್ ನಾಯಕರು ಊಟ ಮಾಡಿರುವುದು ನಿಧಾನಕ್ಕೆ ರಾಜಕಾರಣದ ಬಣ್ಣಕ್ಕೆ ತಿರುಗುತ್ತಿದೆ. ಸಚಿವ ಆರ್.ವಿ‌.ದೇಶಪಾಂಡೆ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಬೀಳಗಿ ತಾಲೂಕಿಗೆ ಭೇಟಿ ನೀಡಿತ್ತು. ಭೇಟಿ ವೇಳೆ ಸಚಿವರಾದ ಆರ್.ವಿ‌.ದೇಶಪಾಂಡೆ, ಆರ್.ಬಿ.ತಿಮ್ಮಾಪೂರ, ಶಿವಾನಂದ ಪಾಟೀಲ ಸೇರಿದಂತೆ ಹಲವರು ಊಟಕ್ಕೆ ಆಗಮಿಸಿದ್ದರು.

ಲೋಕ ಚುನಾವಣಾ ಬೆನ್ನಲ್ಲೇ ಬಿಜೆಪಿ ಮೈತ್ರಿಗೆ ಮತ್ತೊಂದು ಪಕ್ಷ ಕೋಕ್?

ಈ ವೇಳೆ ಕಾಂಗ್ರೆಸ್ ಮುಖಂಡರು ನಿರಾಣಿ ಮನೆಗೆ ತೆರಳಿ ಊಟ ಮಾಡಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸಚಿವ ದೇಶಪಾಂಡೆ ಈ ವಿಚಾರದ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿರಲಿಲ್ಲ.